Advertisement

2 ತಿಂಗಳಲ್ಲಿ ಸ್ಟೌ ಸಮೇತ ಕಿಟ್‌ ವಿತರಣೆ

06:00 AM Jul 25, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿಗಳ ಅನಿಲಭಾಗ್ಯ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಎರಡು ತಿಂಗಳಲ್ಲಿ ಒಂದು ಲಕ್ಷ ಬಿಪಿಎಲ್‌ ಕುಟುಂಬಗಳಿಗೆ ಸ್ಟೌ ಸಮೇತ ಕಿಟ್‌ ವಿತರಿಸಲು ತೀರ್ಮಾನಿಸಲಾಗಿದೆ. ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹಮದ್‌, ಅನಿಲ ಭಾಗ್ಯ ಯೋಜನೆಗೆ ಒಂದು ಲಕ್ಷ ಅನಿಲ ಸಿಲಿಂಡರ್‌ ಸಂಪರ್ಕ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈಗಾಗಲೇ ರಾಜ್ಯ ಸರ್ಕಾರ 1 ಲಕ್ಷ ಸ್ಟೌ ಸೇರಿ ಕಿಟ್‌ ಖರೀದಿಸಿ ಇಟ್ಟುಕೊಂಡಿದೆ. ಎರಡು ತಿಂಗಳಲ್ಲಿ ವಿತರಣೆ ಮಾಡಲಾಗುವುದು ಎಂದರು.

Advertisement

ಮೊದಲ ಹಂತದಲ್ಲಿ ಹತ್ತು ಲಕ್ಷ ಫ‌ಲಾನುಭವಿಗಳಿಗೆ ಕಿಟ್‌ ವಿತರಿಸಲು ತೀರ್ಮಾನಿಸಲಾಗಿದೆ. ಮೊದಲು ಯೋಜನೆಯಡಿ ಪ್ರತಿ ಕಿಟ್‌ ಖರೀದಿಗೆ 4040ರೂ. ನಿಗದಿಪಡಿಸಲಾಗಿತ್ತು. ಇದೀಗ ದರ ಹೆಚ್ಚಳ ಹಿನ್ನೆಲೆಯಲ್ಲಿ 4250ರೂ. ನಿಗದಿಪಡಿಸಲಾಗಿದೆ. 32 ಲಕ್ಷ ಫ‌ಲಾನುಭವಿಗಳಿಗೆ 1280 ಕೋಟಿ ರೂ. ವೆಚ್ಚವಾಗಲಿದೆ. ಮೊದಲ ಹಂತದಲ್ಲಿ 10 ಲಕ್ಷ ಫ‌ಲಾನುವಿಗಳಿಗೆ 400 ಕೋಟಿ ರೂ. ಮೀಸಲಿಡಲಾಗಿದೆ. ಕಿಟ್‌ನಲ್ಲಿ ಸಿಲಿಂಡರ್‌, ರೆಗ್ಯುಲೇಟರ್‌, ಸ್ಟೌ ಇರಲಿದೆ ಎಂದು ತಿಳಿಸಿದರು. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಕಾರ್ಮಿಕ ಸಚಿವ ವೆಂಕಟರಮಣಪ್ಪ ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next