Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ನೆರವು ವಿತರಣೆ

02:33 PM Jun 02, 2021 | Team Udayavani |

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಸಮಾಜ ಕಲ್ಯಾಣ ಯೋಜನೆಯ ಅಡಿಯಲ್ಲಿ ಬಂಟ್ವಾಳ ತಾಲೂಕು ಇರಾ ಗ್ರಾಮದ ಸುಮತಿ ಶೆಟ್ಟಿ ಅವರ ಪತಿ ಜಯಶಂಕರ್‌ ಶೆಟ್ಟಿ ಅವರು ಅನಾರೋಗ್ಯ ಪೀಡಿತರಾಗಿ ಆರ್ಥಿಕ ಸಂಕಷ್ಟದಲ್ಲಿರುವ ಸಮಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಆರ್ಥಿಕ ನೆರವು ನೀಡಿ ಸಹಕರಿಸಲಾಯಿತು.

Advertisement

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರ ಬಳಿ ಸುಮತಿ ಶೆಟ್ಟಿ ಸಾಲೆತ್ತೂರು ಬಂಟರ ಸಂಘದ ಮೂಲಕ ನೆರವು ಕೋರಿ ಬಂದಾಗ ಮಾನವೀಯ ನೆಲೆಯಲ್ಲಿ ಚಿಕಿತ್ಸೆ ಮತ್ತು ಮನೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿ ಐಕಳ ಹರೀಶ್‌ ಶೆಟ್ಟಿ ಅವರು ಚೆಕ್‌ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಾಲೆತ್ತೂರು ಬಂಟರ ಸಂಘದ ಅಧ್ಯಕ್ಷ  ದೇವಪ್ಪ ಶೇಕ ಪೀಲಿಯಡ್ಕ, ಉಪಾಧ್ಯಕ್ಷ ಉದಯಕುಮಾರ್‌ ರೈ ಅಗರಿ, ಜತೆ ಕಾರ್ಯದರ್ಶಿ ಅಮರೇಶ ಶೆಟ್ಟಿ ತಿರುವಾಜೆ, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊÇÉಾಡಿ ಬಾಲಕೃಷ್ಣ ರೈ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next