Advertisement

ಕಾರ್ಮಿಕರಿಗೆ ಆಹಾರದ ಕಿಟ್‌ ವಿತರಣೆ

12:33 PM Apr 26, 2020 | Suhan S |

ಬೇಲೂರು: ಲಾಕ್‌ಡೌನ್‌ ವೇಳೆ ಬಡವರು, ಕೂಲಿ ಕಾರ್ಮಿಕರು ಹಸಿವಿನಿಂದ ಬಳಲಬಾರದು ಎಂದು ಪುರಸಭೆ ಮಾಜಿ ಉಪಾಧ್ಯಕ್ಷರಾದ ಅಶೋಕ್‌, ತಮ್ಮ ವಾರ್ಡಿನ 400 ಕುಟುಂಬಗಳಿಗೆ ಅಗತ್ಯ ಆಹಾರ ಪದಾರ್ಥದ ಕಿಟ್‌ ವಿತರಿಸುತ್ತಿರುವುದು ಶ್ಲಾಘನೀಯ ಎಂದು ಪಿಎಸ್‌ಐ. ಅಜಯ್‌ಕುಮಾರ್‌ ತಿಳಿಸಿದರು.

Advertisement

ಜೆ.ಪಿ.ನಗರದಲ್ಲಿ ಆಹಾರ ಪದಾರ್ಥಗಳ ಕಿಟ್‌ ವಿತರಿಸಿ ಮಾತನಾಡಿದ ಅವರು, ಅಶೋಕ್‌ ತಮ್ಮ ಬಡಾವಣೆ ನಿವಾಸಿಗಳಿಗೆ ಆಹಾರ ಪದಾರ್ಥ ವಿತರಿಸಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಈ ಭಾಗದ ಸಾರ್ವಜನಿಕರು ಕಾನೂನು ಪರಿಪಾಲನೆ ಜೊತೆಗೆ ಅಂತರಕಾಯ್ದುಕೊಂಡು ದಿನಸಿ ಪದಾರ್ಥ ಸ್ವೀಕರಿಸಿ ಎಂದರು.

ಪುರಸಭೆ ಮಾಜಿ ಉಪಾಧ್ಯಕ್ಷ ಅಶೋಕ್‌ ಮಾತನಾಡಿ, ಜೆ.ಪಿ ನಗರದ 11ನೇ ವಾರ್ಡ್‌ನಲ್ಲಿ ಹೆಚ್ಚು ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು ಇದ್ದಾರೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅವರಿಗೆ ತೊಂದರೆಯಾಗಿದೆ ಎಂಬುದನ್ನು ಮನಗೊಂಡು ಸಹಾಯ ಮಾಡುತ್ತಿರುವುದಾಗಿ ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್‌, ಆರೋಗ್ಯಾಧಿಕಾರಿ ವೆಂಕಟೇಶ್‌, ಶಿಕ್ಷಕ ಮಂಜುನಾಥ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next