Advertisement

ಪೌರ ಕಾರ್ಮಿಕರಿಗೆ ಆಹಾರ ಕಿಟ್‌ ವಿತರಣೆ

07:24 AM May 16, 2020 | Suhan S |

ದಾವಣಗೆರೆ: ಕೋವಿಡ್ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಮತ್ತು ನೇರ ಪಾವತಿ ಪೌರ ಕಾರ್ಮಿಕರಿಗೆ ಶುಕ್ರವಾರ ಬಾಪೂಜಿ ವಿದ್ಯಾಸಂಸ್ಥೆ ನಿರ್ದೇಶಕಿ ಡಾ| ಪ್ರಭಾ ಮಲ್ಲಿಕಾರ್ಜುನ್‌ ಆಹಾರ ಸಾಮಗ್ರಿಗಳ ಕಿಟ್‌ ವಿತರಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಜನಕ್ಕೆ ಸಹಾಯ ಮಾಡಲು ಸ್ಥಿತಿವಂತರು ಮುಂದೆ ಬರಬೇಕು. ಎಲ್‌.ಎಂ. ಹನುಮಂತಪ್ಪನವರು ಕೋವಿಡ್ ವಾರಿಯರ್ಸ್‌ಗಳಾಗಿ ಆಹಾರ ಕಿಟ್‌ಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ. ಕೋವಿಡ್ ವಾರಿಯರ್ಸ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಊರಿನ ಸ್ವಚ್ಛತೆಯೊಂದಿಗೆ ತಾವು ಸಹ ಮಾಸ್ಕ್, ಹ್ಯಾಂಡ್‌ ಗ್ಲೌಸ್‌ಗಳನ್ನು ಧರಿಸಿ ನಿಮ್ಮ ಹಾಗೂ ಕುಟುಂಬದ ಸ್ವಚ್ಚತೆಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಪೌರಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್‌.ಎಂ. ಹನುಮಂತಪ್ಪ, ಜಿಲ್ಲಾ ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಎಲ್‌.ಎಚ್‌. ಸಾಗರ್‌ ,ಲೋಹಿತಾಶ್ವ, ರವಿ, ಕೆ.ವಿ.ಚಂದ್ರಶೇಖರ್‌, ಎಂ. ಓಮೇಶ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next