Advertisement

ರೇಬಿಸ್‌ ಉಚಿತ ಲಸಿಕೆ ವಿತರಣೆ ಅಭಿಯಾನಕ್ಕೆ ಚೌವ್ಹಾಣ್‌ ಚಾಲನೆ

10:55 PM Sep 15, 2022 | Team Udayavani |

ಬೆಂಗಳೂರು:  ರೇಬಿಸ್‌ ಅನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 15 ದಿನಗಳ ಕಾಲ ಉಚಿತ ರೇಬಿಸ್‌ ಲಸಿಕೆ ವಿತರಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ. ಚೌವ್ಹಾಣ್‌ ತಿಳಿಸಿದರು.

Advertisement

ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಪಶು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರೇಬಿಸ್‌ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಲಸಿಕೆ ನೋಂದಣಿ ಕಾರ್ಡ್‌ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರೇಬಿಸ್‌ ರೋಗದ ನಿರ್ಮೂಲಕ್ಕಾಗಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಸೆ. 28ರಂದು ವಿಶ್ವ ರೇಬಿಸ್‌ ದಿನ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಉಚಿತ ರೇಬಿಸ್‌ ಲಸಿಕೆ ನೀಡಲಾಗುತ್ತದೆ ಎಂದರು.

ಗ್ರಾ.ಪಂ., ತಾ.ಪಂ., ಪುರಸಭೆ, ನಗರಸಭೆ ಸಹಯೋಗದೊಂದಿಗೆ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಳಿಸಲು ಎಲ್ಲ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next