Advertisement

ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹೆಲ್ಮೆಟ್ ವಿತರಣೆ

12:26 PM Jan 24, 2020 | Suhan S |

ಚಿಂತಾಮಣಿ: 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳಿಂದ ದ್ವಿಚಕ್ರ ಸವಾರರಿಗೆ ಹೆಲ್ಮೆಟ್‌ ವಿತರಣೆ ಮಾಡಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡಿ ಜೀವ ಉಳಿಸಿಕೊಳ್ಳಿ ಎಂದು ಸಾರಿಗೆ ಅಧಿಕಾರಿ ನಾಗಿರೆಡ್ಡಿ ಸಲಹೆ ನೀಡಿದರು. 31ನೇ ರಾಷ್ಟ್ರೀಯ ರಸ್ತೆ ಸಪ್ತಾಹದ ಅಂಗವಾಗಿ ನಗರದ ಕಿಶೋರ್‌ ವಿದ್ಯಾಭವನದಲ್ಲಿ ಹಮ್ಮಿಕೊಂಡಿದ್ದ ಹೆಲ್ಮೆಟ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

Advertisement

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಚಾಲನೆ ಮಾಡುವವರು ತುಂಬಾ ಎಚ್ಚರಿಕೆ ವಹಿಸಬೇಕು. ಅದಕ್ಕಿಂತಲೂ ಮುಖ್ಯವಾಗಿ ರಸ್ತೆ ಸುರಕ್ಷತೆಯ ಕುರಿತು ಸಾರಿಗೆ ಇಲಾಖೆ ನಿಗದಿಪಡಿಸಿರುವ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದರು. 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಆರ್‌ಟಿಒ ಕಚೇರಿಯ ಬ್ರೇಕ್‌ ಇನ್ಸ್‌ಪೆಕ್ಟರ್‌ ಮಹದೇವಪ್ಪ, ಜಿ.ವಿ.ನಾಗರಾಜ್‌, ಕಿಶೋರ್‌, ಸಿರಾಜುಲ್ಲಾ ಬೇಗ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next