Advertisement

ಪ್ರೋತ್ಸಾಹ ಧನ ವಿತರಣೆ

04:56 AM Jun 01, 2020 | Suhan S |

ಅಥಣಿ: ಕೋವಿಡ್ ವಾರಿಯರ್ಸ್ ಗೆ ಸಹಕಾರಿಗಳ ಸಲಾಂ ಎಂಬ ಕಾರ್ಯಕ್ರಮದಡಿ ರವಿವಾರ ಐನಾಪುರ, ಕೃಷ್ಣಾ ಕಿತ್ತೂರ, ಮದಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.

Advertisement

ಡಿಸಿಎಂ ಲಕ್ಷ್ಮಣ ಸವದಿ ಆಶಾ ಕಾರ್ಯಕರ್ತರಿಗೆ ಚೆಕ್‌ ವಿತರಿಸಿ ಮಾತನಾಡಿ, ಕೋವಿಡ್ ವಿರುದ್ಧದ ಹೋರಾಟದಲ್ಲಿ ವೈದ್ಯರ ಜೊತೆಗೂಡಿ ಆಶಾ ಕಾರ್ಯಕರ್ತರು ಕೆಲಸ ಮಾಡಿದ್ದನ್ನು ಗುರುತಿಸಿ ಅಭಿನಂದಿಸುವ ಕೆಲಸಕ್ಕೆ ಸರ್ಕಾರ ಚಾಲನೆ ನೀಡಿದೆ. ನಿಮ್ಮ ಕೆಲಸವನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ನಾವು ಸಹಕಾರ ಸಂಘಗಳ ಸಹಾಯ ಬಯಸಿದಾಗ ರಾಜ್ಯದ ಎಲ್ಲ ಸಹಕಾರಿ ಸಂಘಗಳು ಮುಂದಾದವು. ಈಗ ತಾಲೂಕಿನ 456 ಆಶಾ ಕಾರ್ಯಕರ್ತರಿಗೆ ತಲಾ ಮೂರು ಸಾವಿರ ರೂ. ಚೆಕ್‌ ವಿತರಿಸಲಾಗುತ್ತಿದೆ ಎಂದರು.

ಈ ವೇಳೆ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ವಿನಾಯಕ ಲಕ್ಸಾಣಿ, ರವಿ ಪೂಜಾರಿ, ಪ್ರಕಾಶ ಕೊರಬು ಸೇರಿದಂತೆ ಹಲವು ಸಹಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next