Advertisement

ಅರ್ಹರಿಗೆ ಪಡಿತರ ವಿತರಣೆ: ಸಿಎಂ ಸೂಚನೆ

12:50 AM Apr 07, 2020 | Sriram |

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಅರ್ಹರಿಗೆ ಸೂಕ್ತ ದಾಖಲೆ ಇಲ್ಲ ಎಂಬ ಕಾರಣಕ್ಕೆ ಪಡಿತರ ವಿತರಣೆ ನಿರಾಕರಿಸಬಾರದು. ಅರ್ಹರಿಗೆ ಪಡಿತರ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

Advertisement

ಸೋಮವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಸಹಿತ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬೆಂಗಳೂರಿನಲ್ಲಿ ಶ್ರೀಮಂತರು, ಮಧ್ಯಮ ವರ್ಗದವರು ಪಡಿತರ ಪಡೆಯುವುದಿಲ್ಲ. ಹಾಗಾಗಿ ಬಿಪಿಎಲ್‌ ಕಾರ್ಡ್‌ ಇಲ್ಲ, ಒಟಿಪಿ ಖಾತರಿ ಇಲ್ಲ, ಇತರ ದಾಖಲೆ ಇಲ್ಲವೆಂಬ ಕಾರಣಕ್ಕೆ ಪಡಿತರ ವಿತರಣೆ ನಿರಾಕರಿಸಬಾರದು. ಸ್ಥಿತಿಗತಿ ಅವಲೋಕಿಸಿ ಪಡಿತರ ವಿತರಣೆಗೆ ಕ್ರಮಕೈಗೊಳ್ಳಬೇಕು. ಈ ಬಗ್ಗೆ ಯಾವುದೇ ದೂರು ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next