Advertisement

ವಲಸೆ ಕಾರ್ಮಿಕರಿಗೆ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಪಡಿತರ ವಿತರಣೆ

04:37 PM May 18, 2020 | keerthan |

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ರಾಜ್ಯದಲ್ಲಿರುವ ವಲಸೆ ಕಾರ್ಮಿಕರಿಗೆ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ತಿಂಗಳಲ್ಲಿ ತಲಾ ಐದು ಕೆಜಿ ಅಕ್ಕಿ, ಜೂನ್ ತಿಂಗಳಲ್ಲಿ ತಲಾ ಐದು ಕೆಜಿ ಅಕ್ಕಿ ಜೊತೆಗೆ ಒಂದು ಕುಟುಂಬಕ್ಕೆ ಎರಡು‌ ಕೆಜಿ‌ ಕಡಲೇ ಕಾಳು ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಗೋಪಾಲಯ್ಯ ಹೇಳಿದ್ದಾರೆ.

Advertisement

ಈ ಬಗ್ಗೆ ಮಾತನಾಡಿದ ಅವರು, ಪಡಿತರ ಕಾರ್ಡ್ ಹೊಂದಿರದ 40.19 ಲಕ್ಷ ಜನರಿಗೆ ಅನುಕೂಲವಾಗಲಿದ್ದು, ಬಿಬಿಎಂಪಿ ‌ಕಾರ್ಮಿಕ ಇಲಾಖೆ ಸಹಯೋಗದಲ್ಲಿ ವಿತರಣೆಗೆ ಕ್ರಮ ಕೈಗೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿದಿದ್ದು, ಮೇ ಅಂತ್ಯದವರೆಗೆ ನಾಲ್ಕನೇ ಹಂತದಲ್ಲಿ ಮುಂದುವರಿಯಲಿದೆ. ಸರಕಾರಿ- ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ನೀಡಿದ್ದು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next