Advertisement

ಪಡಿತರ ವಿತರಣೆ

03:39 PM Jun 08, 2020 | Suhan S |

ಹಾವೇರಿ: ರಾಜ್ಯ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಮತ್ತು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಮತ್ತು ಆತ್ಮ ನಿರ್ಭರ್‌ ಭಾರತ್‌ ಯೋಜನೆ ಅಡಿ ಜೂನ್‌ ತಿಂಗಳಿನ ಪಡಿತರ ಆಹಾರ ಧಾನ್ಯವನ್ನು ಜಿಲ್ಲೆಯಲ್ಲಿ ವಿತರಿಸಲಾಗುತ್ತಿದ್ದು, ಅಂತ್ಯೋದಯ, ಬಿಪಿಎಲ್‌, ಎಪಿಎಲ್‌ ಕಾರ್ಡುದಾರರಿಗೆ, ವಲಸಿಗರಿಗೆ ಹಾಗೂ ಆನ್‌ಲೈನ್‌ನಲ್ಲಿ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ಪಡಿತರ ಪಡೆಯಲು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

Advertisement

ಅಂತ್ಯೋದಯ ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಉಚಿತವಾಗಿ 35 ಕೆ.ಜಿ.ಅಕ್ಕಿ, ಹಾಗೂ ಪ್ರತಿ ಕುಟುಂಬಕ್ಕೆ ಎರಡು ಕೆ.ಜಿ.ತೊಗರಿ ಬೆಳೆ ನೀಡಲಾಗುತ್ತಿದೆ. ಬಿಪಿಎಲ್‌ ಪಡಿತರ ಚೀಟಿ ಹೊಂದಿದ ಪ್ರತಿ ಸದಸ್ಯರಿಗೆ ಉಚಿತವಾಗಿ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ ಎರಡು ಕೆ.ಜಿ. ಗೋಧಿ ಹಾಗೂ ಎರಡು ಕೆ.ಜಿ. ತೊಗರಿ ಬೆಳೆ ವಿತರಿಸಲಾಗುತ್ತಿದೆ. ಎಪಿಎಲ್‌ ಪಡಿತರ ಚೀಟಿ ಹೊಂದಿದ ಪ್ರತಿ ಸದಸ್ಯರಿಗೆ 15 ರೂ.ದಂತೆ ಪ್ರತಿ ಕೆ.ಜಿ.ಗೆ ಒಪ್ಪಿಗೆ ನೀಡಿದ ಹಾಗೂ ಒಪ್ಪಿಗೆ ನೀಡಲಾರದ ಪಡಿತರ ಚೀಟಿದಾರ ಏಕ ಸದಸ್ಯರಿಗೆ ಐದು ಕೆ.ಜಿ. ಅಕ್ಕಿ ಹಾಗೂ ಎರಡು ಮತ್ತು ಎರಡಕ್ಕಿಂತ ಹೆಚ್ಚಿನ ಸದಸ್ಯರಿಗೆ 10 ಕೆ.ಜಿ.ಅಕ್ಕಿ ವಿತರಣೆ ಮಾಡಲಾಗುವುದು. ಆನ್‌ಲೈನ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿದ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಉಚಿತವಾಗಿ 10 ಕೆ.ಜಿ.ಅಕ್ಕಿ ಹಾಗೂ ಎಪಿಎಲ್‌ ಪ್ರತಿ ಅರ್ಜಿಗೆ ಕೆ.ಜಿ.ಗೆ 15 ರೂ.ಗಳಂತೆ 10 ಕೆಜಿ. ಅಕ್ಕಿ ವಿತರಣೆ ಮಾಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next