Advertisement

ಹಿಂದೂ ಜೂನಿಯರ್‌ ಕಾಲೇಜು ಶಿರ್ವ: ಜೇಸಿಐ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

02:27 PM Oct 18, 2021 | Team Udayavani |

ಶಿರ್ವ: ಇಲ್ಲಿನ ಹಿಂದೂ ಜೂನಿಯರ್‌ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಾಲೇಜಿನ ಅರ್ಹ ವಿದ್ಯಾರ್ಥಿಗಳಿಗೆ ಜೇಸಿಐ ಮಂಗಳೂರು ಲಾಲ್‌ಬಾಗ್‌ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವು ಅ. 16ರಂದು ಕಾಲೇಜಿನ ಮುದ್ದು ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.

Advertisement

ಜೇಸಿಐ ವಲಯಾಧ್ಯಕ್ಷೆ ಸೌಜನ್ಯಾ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ 25 ವಿದ್ಯಾರ್ಥಿಗಳಿಗೆ ರೂ. 62,500 ವಿದ್ಯಾರ್ಥಿ ವೇತನ ವಿತರಿಸಿದರು.ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಶ್ರಾವ್ಯ ಅವರಿಗೆ ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ವತಿಯಿಂದ ರೂ. 10,000 ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಸಂಸ್ಥೆಯ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ,ಕಾಲೇಜು ಆಡಳಿತ ಮಂಡಳಿಯ ಸದಸ್ಯ ನಿತ್ಯಾನಂದ ಹೆಗ್ಡೆ, ಆಡಳಿತಾಧಿಕಾರಿ ಪ್ರೊ| ವೈ. ಭಾಸ್ಕರ ಶೆಟ್ಟಿ,ಹಳೆವಿದ್ಯಾರ್ಥಿಸಂಘದ ಮುಂಬೈ ಸಂಚಾಲಕ ಕಿಶೋರ್‌ ಶೆಟ್ಟಿ ಕುತ್ಯಾರು, ಜೇಸಿಐ ಮಂಗಳೂರು ಲಾಲ್‌ಬಾಗ್‌ನ ಅಧ್ಯಕ್ಷ/ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಶಾಂತ್‌ ಶೆಟ್ಟಿ, ಪ.ಪೂ. ಕಾಲೇಜಿನ ಪ್ರಾಂಶುಪಾಲ ಭಾಸ್ಕರ್‌ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್‌ ಶೆಟ್ಟಿ ಸ್ವಾಗತಿಸಿದರು. ಲಕ್ಷ್ಮೀ ದೇವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ,ಸಂಘದ ಗೌರವಾಧ್ಯಕ್ಷ ಸಚ್ಚಿದಾನಂದ ಹೆಗ್ಡೆ ವಂದಿಸಿದರು.

ಬಳಿಕ ಸಂಸ್ಥೆಯ ಪ.ಪೂ. ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಜೇಸಿಐ ರಾಷೀrÅಯ ತರಬೇತುದಾರೆ ಸೌಜನ್ಯಾ ಹೆಗ್ಡೆ ಅವರಿಂದ ತರಬೇತಿ ಕಾರ್ಯಾಗಾರ ನಡೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next