Advertisement

ವಿಐಎಸ್‌ಎಲ್‌ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

10:15 AM Jul 04, 2020 | Suhan S |

ಭದ್ರಾವತಿ: ಪಲ್ಲಿನ ವಿಐಎಸ್‌ಎಲ್‌ ಕಾರ್ಖಾನೆಯ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿವಕುಮಾರ್‌ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

Advertisement

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೋಕಿತರ ದಾಖಲಾತಿ ಮತ್ತು ಚಿಕಿತ್ಸೆಗೆ ಅಗತ್ಯವಾದ ಹೆಚ್ಚಿನ ಬೆಡ್‌ಗಳನ್ನು ವ್ಯವಸ್ಥೆ ಮಾಡುವತ್ತ ಗಮನ ಹರಿಸಿದ್ದು, ಅದಕ್ಕಾಗಿ ಸೂಕ್ತ ಆಸ್ಪತ್ರೆ ಕಟ್ಟಡಗಳನ್ನು ಗುರುತಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭದ್ರಾವತಿಯ ನ್ಯೂಟೌನ್‌ನಲ್ಲಿರುವ ವಿಐಎಸ್‌ಎಲ್‌ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿ ಶಿವಕುಮಾರ್‌ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಎಲ್ಲಾ ವಿಭಾಗಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಂಪನಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಎಂ.ವೈ.ಸುರೇಶ್‌ ಅವರು ಆಸ್ಪತ್ರೆಯ ಕುರಿತು ಮಾಹಿತಿ ನೀಡಿದರು.

ತಹಶೀಲ್ದಾರ್‌ ಶಿವಕುಮಾರ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next