Advertisement

ಪರಿಹಾರ ವಿತರಣೆಗೆ ನೀಡಿ ಮೊದಲ ಆದ್ಯತೆ

08:08 PM Oct 14, 2021 | Team Udayavani |

ಧಾರವಾಡ: ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳು, ಬೆಳೆ ಹಾಗೂ ಕೋವಿಡ್‌ನಿಂದ ಮೃತಪಟ್ಟವರ ವಾರಸುದಾರರಿಗೆ ಪರಿಹಾರ ವಿತರಣೆ ಕಾರ್ಯಕ್ಕೆ ಮೊದಲ ಆದ್ಯತೆ ನೀಡಿ ನೊಂದವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|ರವಿಕುಮಾರ ಸುರಪುರ ಹೇಳಿದರು.

Advertisement

ಜಿಪಂ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿ ಧಿಯಡಿ ಕೈಗೊಳ್ಳುವ ಕಾಮಗಾರಿಗಳನ್ನು ವಿಳಂಬ ಮಾಡಬಾರದು. ಆರೋಗ್ಯ ನಂದನ ಕಾರ್ಯಕ್ರಮದ ಮೂಲಕ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಿರಂತರವಾಗಿ ನಡೆಯಬೇಕು. ಹಿಂಗಾರು ಹಂಗಾಮಿನ ಬೀಜ, ರಸಗೊಬ್ಬರ ವಿತರಣೆ ಸಮರ್ಪಕವಾಗಿ ಜರುಗಬೇಕು. ವಿವಿಧ ಇಲಾಖೆ ಹಾಸ್ಟೆಲ್‌ಗ‌ಳಿಗೆ ಹಾಪ್‌ಕಾಮ್ಸ್‌ ನಿಗದಿ ಪಡಿಸಿದ ದರಗಳಲ್ಲಿ ನೇರವಾಗಿ ರೈತರಿಂದ ತರಕಾರಿ-ಹಣ್ಣುಗಳನ್ನು ಖರೀದಿಸಿ ಪೂರೈಸಬಹುದು. ಜಿಪಂ ಜಲಶಕ್ತಿ ಅಭಿಯಾನದಡಿ ಹಾಸ್ಟೆಲ್‌ ಕಟ್ಟಡಗಳಿಗೆ ಮಳೆನೀರು ಕೊಯ್ಲು ಸೌಲಭ್ಯ ಕಲ್ಪಿಸಬೇಕು. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮ್ಯಾನ್ಯುವಲ್‌ ಸ್ಕಾ ವೆಂಜಿಂಗ್‌ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಟ್ಟಿಂಗ್‌ ಅಥವಾ ಸಕ್ಕಿಂಗ್‌ ಯಂತ್ರಗಳನ್ನು ಬಳಸಬೇಕು ಎಂದು ಸೂಚಿಸಿದರು.

ಡಿಸಿ ನಿತೇಶ ಪಾಟೀಲ ಮಾತನಾಡಿ, ಸಂಸದರು ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿ ಧಿಯಡಿ ಕೈಗೊಂಡಿರುವ ಕಾಮಗಾರಿಗಳು ವಿಳಂಬವಾದರೆ ಸಂಬಂಧಿಸಿದ ಏಜೆನ್ಸಿಗಳು ಸಕಾರಣಗಳೊಂದಿಗೆ ಜಿಲ್ಲಾಡಳಿತ ಹಾಗೂ ಸಂಬಂ ಧಿಸಿದ ಚುನಾಯಿತ ಪ್ರತಿನಿಧಿಗಳಿಗೆ ಪತ್ರ ಬರೆಯಬೇಕು. ಅದನ್ನು ಪರಿಶೀಲಿಸಿ ಪರ್ಯಾಯ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಜಿಪಂ ಸಿಇಒ ಡಾ|ಬಿ. ಸುಶೀಲಾ, ಹು-ಧಾ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಪ್ರೊಬೆಷನರಿ ಐಎಎಸ್‌ ಅಧಿಕಾರಿ ಮಾಧವ ಗಿತ್ತೆ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಎಸಿ ಡಾ|ಬಿ.ಗೋಪಾಲಕೃಷ್ಣ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next