Advertisement

ರಮೇಶ ಆಯ್ಕೆಯಿಂದ ಜಿಲ್ಲೆ ಅಭಿವೃದ್ಧಿ

03:21 PM Dec 10, 2019 | Team Udayavani |

ಮೂಡಲಗಿ: ಗೋಕಾಕ ಮತಕ್ಷೇತ್ರದ ಇತಿಹಾಸದಲ್ಲಿಯೇ ಪ್ರಥಮ ಭಾರೀಗೆ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರು ಆಯ್ಕೆಯಾಗಿದರಿಂದ ಮೂಡಲಗಿ ಪಟ್ಟಣ ಸೇರಿದಂತೆ ಅರಭಾವಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಗುಲಾಲ್‌ ಎರಚಿ ವಿಜಯೋತ್ಸವ ಆಚರಿಸಿದರು.

Advertisement

ಈ ವೇಳೆ ಮೂಡಲಗಿ ಪುರಸಭೆ ಅಧ್ಯಕ್ಷ ಸಂತೋಷ ಸೋನವಾಲಕರ ಮಾತನಾಡಿ, ರಮೇಶ ಜಾರಕಿಹೊಳಿ ಅವರು ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದರಿಂದ ರಾಜ್ಯ ರಾಜಕಾರಣ ಹಾಗೂ ಬೆಳಗಾವಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಗೋಕಾಕ ಕ್ಷೇತ್ರದಲ್ಲಿ ಅರಭಾವಿಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಅವಿರತ ಪ್ರಯತ್ನ ಹಾಗೂ ಉಸ್ತುವಾರಿ ವಹಿಸಿದ್ದ ರಾಜ್ಯ ನಾಯಕರ ಕೊಡುಗೆ ಮೆಚ್ಚುವಂತಹದಾಗಿದೆ ಎಂದರು.

ಮೂಡಲಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಗುಲಾಲು ಎರಚಿ ಬೈಕ್‌ ರ್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಸದಸ್ಯ ಹಣಮಂತ ಗುಡ್ಲಮನಿ, ಶಿವು ಚಂಡಕಿ, ಮುಖಂಡರಾದ ಅನ್ವರ ನದಾಫ್‌, ಮರೆಪ್ಪ ಮರೆಪ್ಪಗೋಳ, ಸಿದ್ದು ಗಡ್ಡೆಕರ, ಬಸು ಝೆಂಡೆಕುರುಬರ, ಕುಮಾರ ಗಿರಡ್ಡಿ, ಮಹಾದೇವ ಶೆಕ್ಕಿ, ಮಲ್ಲು ಯಾದವಾಡ, ಶಿವಬೋಧ ಗೋಕಾಕ, ಶಾನೂರ ಬಂಗೆನ್ನವರ, ಸಿದ್ಲಿಂಗಪ್ಪ ಯರಗಟ್ಟಿ, ರಾಮು ಝಂಡೆಕುರಬರ, ಚೇತನ ನಿಶಾನಿಮಠ, ರಾಜು ಭಜಂತ್ರಿ, ಕಲ್ಮೇಶ ಗೋಕಾಕ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next