Advertisement

ಆ. 9 ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ; ತಾಲೂಕು ಮಟ್ಟದಲ್ಲಿ ಕೆಡಿಪಿ ಸಭೆ

08:11 PM Jul 18, 2023 | Team Udayavani |

ಹೊಸಪೇಟೆ :ವಿಜಯನಗರ ನೂತನ ಜಿಲ್ಲಾಧಿಕಾರಿ ದಿವಾಕರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿ ಮಾಡಿ ಚರ್ಚಿಸಿದರು.

Advertisement

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಚಿವರು ಶುಭ ಕೋರಿದರು.ಆ. 9 ರಿಂದ 15 ರವರೆಗೆ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಲಿದ್ದು, ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ನಡೆಸಲಿದ್ದು ಆ. 9 ರಂದು ಹೊಸಪೇಟೆ ತಾಲೂಕು ಕೆಡಿಪಿ ಸಭೆ ನಿಗದಿಯಾಗಿದೆ.

ಈ ಮಧ್ಯೆ ವಿಧಾನಮಂಡಲ ಅಧಿವೇಶನ ನಡುವೆಯೇ ವಿಕಾಸಸೌಧದಲ್ಲಿ ವಿಜಯನಗರ ಜಿಲ್ಲೆಯ ಶಾಸಕರ ಸಭೆ ನಡೆಸಿ ನೂತನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಕೋರಲು ತೀರ್ಮಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next