Advertisement

ಗರಿಷ್ಠ ಪರಿಹಾರ ಕೋರಲು ಜಿಲ್ಲಾ ಪಂಚಾಯತ್ ನಿರ್ಧಾರ

01:05 PM Aug 28, 2019 | Team Udayavani |

ಹಾಸನ: ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿರುವ ಹಾನಿಯ ಬಗ್ಗೆ ಜಿಲ್ಲಾಡಳಿ ತವು ಸಲ್ಲಿಸಿರುವ ವರದಿಯನ್ವಯ ಗರಿಷ್ಠ ಪರಿಹಾರದ ಮೊತ್ತವನ್ನು ಜಿಲ್ಲೆಗೆ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವ ನಿರ್ಣಯ ವನ್ನು ಜಿಲ್ಲಾ ಪಂಚಾಯಿತಿ ಕೈಗೊಂಡಿದೆ.

Advertisement

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್‌. ಬಾಲಕೃಷ್ಣ, ಕೆ.ಎಸ್‌.ಲಿಂಗೇಶ್‌ ಅವರು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಂಭ ವಿಸಿರುವ ಹಾನಿಯ ಬಗ್ಗೆ ಜಿಲ್ಲಾಧಿಕಾರಿಯವರು ವರದಿ ಸಲ್ಲಿಸುತ್ತಾರೆ. ಆದರೆ ಜಿಲ್ಲಾ ಪಂಚಾಯಿತಿ ಯಿಂದಲೂ ಪ್ರತ್ಯೇಕ ಪ್ರಸ್ತಾವನೆಯನ್ನು ಮುಖ್ಯ ಮಂತ್ರಿಯವರು, ಕಂದಾಯ ಸಚಿವರಿಗೆ ಸಲ್ಲಿಸಿದರೆ ಹೆಚ್ಚು ಪರಿಹಾರದ ಮೊತ್ತ ಪಡೆಯಲು ಸಾಧ್ಯ ವಾಗುತ್ತದೆ. ನಾವೂ ಸರ್ಕಾರದ ಮಟ್ಟದಲ್ಲಿ ಒತ್ತಡ ತರುತ್ತೇವೆ ಎಂದು ನೀಡಿದ ಸಲಹೆಗೆ ಸಮ್ಮತಿಸಿದ ಸಭೆಯು ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಭೆಯು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿತು.

6 ತಾಲೂಕುಗಳಲ್ಲಿ ಅಪಾರ ಹಾನಿ: ಜಿಲ್ಲೆಯ 6 ತಾಲೂಕುಗಳಲ್ಲಿ ಅಪಾರ ಹಾನಿ ಸಂಭವಿಸಿದ್ದು ರಸ್ತೆಗಳು, ಸೇತುವೆಗಳು, ವಿದ್ಯುತ್‌ ಮಾರ್ಗಗಳು, ಶಾಲಾ ಕಟ್ಟಡಗಳು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ಶಾಸಕರು ಮತ್ತು ಸದಸ್ಯರು ಸಭೆಯಲ್ಲಿ ವಿವರ ನೀಡಿದರು.

ಪರಿಹಾರಕ್ಕಾಗಿ ಮನವಿ: ಈ ಸಂದರ್ಭದಲ್ಲಿ ಮಾತ ನಾಡಿದ ಅಧ್ಯಕ್ಷೆ ಶ್ವೇತಾ, ತಾವು ಈಗಾಗಲೇ ಒಂದು ಸುತ್ತು ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಶೀಘ್ರದಲ್ಲೇ ಸದಸ್ಯರೊಂದಿಗೆ ತೆರಳಿ ಅಧಿ ಕಾರಿಗಳಿಂದಲೂ ಮಾಹಿತಿ ಪಡೆದು ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದರು.

ಶಾಲಾ ಕಟ್ಟಡ ದುರಸ್ತಿಗೆ ಕ್ರಮ: ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಮಾತನಾಡಿ ಜಿಲ್ಲೆಯಲ್ಲಿ ತೀವ್ರ ಹಾನಿಯಾಗಿರುವ ಶಾಲೆಗಳನ್ನು ಗುರುತಿಸಿ ಪಟ್ಟಿಮಾಡಿ ವರದಿ ಸಲ್ಲಿ ಸಿದ್ದು, ಶಾಲಾ ಕಟ್ಟಡಗಳ ದುರಸ್ತಿಗೆ ಅಧಿ ಕಾರಿಗಳು ಎಲ್ಲಾ ಸದಸ್ಯರ ಭೇಟಿಯಾಗಿ ಮಾಹಿತಿ ಪಡೆಯಲಿದ್ದಾರೆ. ಈ ಬಗ್ಗೆ ನಿರ್ದೇಶನ ನೀಡಲಾಗಿದೆ ಎಂದರು.

Advertisement

ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಹಾಗೂ ಆರೋಗ್ಯ, ಹಣಕಾಸು ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗಳ ನಿರ್ಣಯಗಳನ್ನು ಸಭೆಯು ಚರ್ಚೆ ಇಲ್ಲದೇ ಅನುಮೋದಿಸಿತು.

ಉಪಾಧ್ಯಕ್ಷ ಎಚ್.ಪಿ. ಸ್ವರೂಪ್‌, ಉಪ ಕಾರ್ಯ ದರ್ಶಿಗಳಾದ ಮಹೇಶ್‌, ಅರುಣ್‌ ಕುಮಾರ್‌, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್‌ಗೌಡ ಮತ್ತಿತರು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next