Advertisement

ಕಾಂಗ್ರೆಸ್‌ನಿಂದ ಜಿಲ್ಲಾವಾರು ಸಭೆ: ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು

10:05 PM Nov 04, 2022 | Team Udayavani |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್‌ ತಯಾರಿ ಆರಂಭಿಸಿದ್ದು, ಜಿಲ್ಲಾವಾರು ಸಭೆ ನಡೆಸುತ್ತಿದೆ.

Advertisement

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೋಲಾರ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳ ಸಭೆ ನಡೆಸಿದ ಮುಖಂಡರಿಂದ ಮಾಹಿತಿ ಸಂಗ್ರಹಿಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್‌ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು.

ಶನಿವಾರ ಹಾಸನ, ದಕ್ಷಿಣ ಕನ್ನಡ, ಬೆಳಗಾವಿ ನಗರ ವ್ಯಾಪ್ತಿಯ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ. ಇದಾದ ನಂತರ ನ.6 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನಾ ಸಮಾವೇಶ ನಡೆಯಲಿದ್ದು, ನ.10 ಮತ್ತು 11 ರಂದು ಮತ್ತೆ ಸಭೆ ನಡೆಯಲಿದೆ.

ನ.10 ರಂದು ಬೆಂಗಳೂರು ಸೆಂಟ್ರಲ್‌, ಬೆಂಗಳೂರು ಗ್ರಾಮಾಂತರ , ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಸಭೆ, ನ.11 ರಂದು ರಾಯಚೂರು, ವಿಜಯಪುರ, ಬಾಗಲಕೇಟೆ ಜಿಲ್ಲೆಗಳ ಸಭೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next