Advertisement

ದಿವಾಕರ್  ಕ್ಲಾಸಸ್‌ ಮೋಹನೆ: ವಾರ್ಷಿಕೋತ್ಸವ ಸಂಭ್ರಮ

04:35 PM Dec 11, 2018 | |

ಡೊಂಬಿವಲಿ: ದಿವಾಕರ್  ಕ್ಲಾಸಸ್‌ ಇದರ ವಾರ್ಷಿಕೋತ್ಸವ ಸಂಭ್ರಮವು ಡಿ. 2ರಂದು ಅಪರಾಹ್ನ 4ರಿಂದ ಅಂಬಿವಲಿ, ಮೋಹನೆಯ ಗಣಪತಿ ಚೌಕ್‌ನ ನಲಂದಾ  ಬುದ್ಧ ವಿಹಾರ್‌ ಸಭಾಗೃಹದಲ್ಲಿ ನಡೆಯಿತು.

Advertisement

ಸಮಾರಂಭವನ್ನು ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅà ಇದರ ಕಾರ್ಯಾಧ್ಯಕ್ಷ, ಭಾರತ್‌ ಬ್ಯಾಂಕ್‌ ಇದರ ನಿರ್ದೇಶಕ ಎನ್‌. ಟಿ. ಪೂಜಾರಿ ಇವರು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯವಾಗಿರುತ್ತದೆ. ಆ ಗುರಿಯನ್ನು ತಲುಪುವ ಛಲ, ಪರಿಶ್ರಮವಿದ್ದಾಗ ಮಾತ್ರ ಯಶಸ್ವಿ ಜೀವನ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ತಾವು ಕಲಿತ ಶಿಕ್ಷಣ ಸಂಸ್ಥೆಯನ್ನು ಸದಾ ನೆನಪಿನಲ್ಲಿಟ್ಟುಕೊಂಡು ಉನ್ನತ ಹುದ್ಧೆಯನ್ನು ಅಲಂಕರಿಸಿ ಸಂಸ್ಥೆಯ ಋಣ ತೀರಿಸುವ ಕಾರ್ಯದಲ್ಲಿ ತೊಡಗಬೇಕು. ಗುರು ಹಿರಿಯರು ಮತ್ತು ಹೆತ್ತವರು ಹಾಗೂ ದೇವರ ಅನುಗ್ರಹವಿದ್ದಲ್ಲಿ ಯಾವುದೇ ಸಾಧನೆಯನ್ನು ಮಾಡಬಹುದು. ಮಕ್ಕಳು ಪರಿಶ್ರಮ, ಏಕಾಗ್ರತೆ,  ಶ್ರದ್ಧೆಯಿಂದ ಕಲಿತು ಜೀವನದಲ್ಲಿ ಸುಸಂಸ್ಕೃತ ವ್ಯಕ್ತಿಗಳಾಗಿ ಬಾಳಬೇಕು ಎಂದು ನುಡಿದರು.

ಮುಖ್ಯ ಅತಿಥಿಯಾಗಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಯ ಕಾರ್ಯವೈಖರಿಯನ್ನು ಕಂಡಾಗ ಬಹಳಷ್ಟು ಸಂತೋಷವಾಗುತ್ತಿದೆ. ಸಂಸ್ಥೆಯು ಇನ್ನಷ್ಟು ಸಾಧನೆಗಳನ್ನು ಮಾಡಿ ಬೆಳಗಬೇಕು. ಮಕ್ಕಳ ಉತ್ಸಾಹ, ಪರಿಶ್ರಮವು ಇಂದಿನ ಕಾರ್ಯಕ್ರಮದಿಂದ ತಿಳಿದು ಬರುತ್ತದೆ. ಕೇವಲ ಶಿಕ್ಷಣವನ್ನು ಪಡೆಯುವುದು ಮಾತ್ರವಲ್ಲದೆ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳು ಆದರ್ಶ ಪ್ರಜೆಗಳಾಗಿ ಬಾಳಲು ಸಾಧ್ಯವಾಗುತ್ತದೆ ಎಂದರು.

ಸ್ಥಳೀಯ ಶಾಸಕ ನರೇಂದ್ರ ಪವಾರ್‌ ಅವರು ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ದೇಶದ ಸಂಪತ್ತಾಗಿದ್ದು, ಅವರನ್ನು ಆದರ್ಶ ಪ್ರಜೆಗಳನ್ನಾಗಿ ಬೆಳೆಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳಿಗಿದೆ. ಈ ನಿಟ್ಟಿನಲ್ಲಿ ದಿವಾಕರ್‌ ಕ್ಲಾಸಸ್‌ನ
ಕಾರ್ಯವೈಖರಿ ಅಭಿನಂದನೀಯವಾಗಿದೆ ಎಂದು ನುಡಿದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಿಶೇಷ ಅತಿಥಿಯಾಗಿ ಆಗಮಿಸಿದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷ ಹರೀಶ್‌ ಜಿ. ಅಮೀನ್‌ ಅವರು ಮಾತನಾಡಿ, ಇಂದು ಸಭಾಗೃಹದಲ್ಲಿ ತುಂಬಿ ತುಳುಕುತ್ತಿರುವ ವಿದ್ಯಾರ್ಥಿಗಳು ಹಾಗೂ ಪಾಲಕರ-ಪೋಷಕರನ್ನು ಕಂಡಾಗ ಈ ಸಂಸ್ಥೆಯ ಉತ್ಕೃಷ್ಟ ಸಾಧನೆಯನ್ನು ಪ್ರತಿಬಿಂಬಿಸುವಂತಿದೆ ಎಂದು ನುಡಿದು ಶುಭಹಾರೈಸಿದರು.

Advertisement

ವಿಶೇಷ ಅತಿಥಿಯಾಗಿ ಪಾಲ್ಗೊಂಡ ಭಾರತ್‌ ಬ್ಯಾಂಕಿನ ನಿರ್ದೇಶಕ ಪುರುಷೋತ್ತಮ ಎಸ್‌. ಕೋಟ್ಯಾನ್‌ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮಾತಾಪಿತರು ಹಾಗೂ ಹಿರಿಯರ ಕನಸನ್ನು ನನಸಾಗಿಸುವಲ್ಲಿ ಶ್ರಮಿಸಬೇಕು. ನಾವು ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ಪಡೆದಾಗ ಗುರಿಯನ್ನು ತಲುಪಲು ಸಾಧ್ಯವಿದೆ ಎಂದರು.
ಸಮಾರಂಭದಲ್ಲಿ ಕಳೆದ 15 ವರ್ಷಗಳಿಂದ ಸಂಸ್ಥೆಯ ಪ್ರಬಂಧಕರಾಗಿ ಸೇವೆ ಸಲ್ಲಿಸುತ್ತಿರುವ ಶಶಿಕಲಾ ಜಗದಾಳೆ ಅವರನ್ನು ಸಮ್ಮಾನಿಸಲಾಯಿತು. ಅಲ್ಲದೆ ಶಿಕ್ಷಣ ಸಂಸ್ಥೆಯ ಶಿಕ್ಷಕರನ್ನು ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು, ಸದಸ್ಯರನ್ನು ಗೌರವಿಸಲಾಯಿತು.

ಗೌರವ ಅತಿಥಿಗಳಾಗಿ ಬಿಜೆಪಿ ಮೋಹನೆ-ಟಿಟ್ವಾಲಾ ವಲಯದ ಅಧ್ಯಕ್ಷ ಸುಭಾಶ್‌ ಜಿ. ಪಾಟೀಲ್‌, ನಗರ ಸೇವಕಿ ಸುನಂದಾ ಮುಕುಂದ್‌ ಕೋಟ್‌ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲ ದಿವಾಕರ ಆರ್‌. ಸಾಲ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ಅತಿಥಿ-ಗಣ್ಯರುಗಳನ್ನು ದಿವಾಕರ ಸಾಲ್ಯಾನ್‌ ಅವರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆದವು. ವಿದ್ಯಾರ್ಥಿ ಹರ್ಷ್‌ ಸಿಂಗ್‌ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿಗಳು, ಪಾಲಕ-ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಕಳೆದ ನಲ್ವತ್ತು ವರ್ಷಗಳಿಂದ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ  ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳನ್ನು ಯಶಸ್ವಿ ವ್ಯಕ್ತಿಗಳನ್ನಾಗಿ ಬಿಂಬಿಸಿದ ಹೆಗ್ಗಳಿಕೆಯನ್ನು ಸಂಸ್ಥೆಯು ಹೊಂದಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಧಾರೆ ಎರೆಯುವುದು ಭಗವಂತನ ಪೂಜೆ ಎಂಬ ದೃಷ್ಟಿಯಿಂದ ಈ ಕಾರ್ಯದಲ್ಲಿ ತೊಡಗಿದ್ದೇನೆ. ನನ್ನ ಕೊನೆಯುಸಿರಿರುವವರೆಗೆ ಶಿಕ್ಷಣವನ್ನು ಧಾರೆಯೆರೆಯುತ್ತೇನೆ. ಯಾವುದೇ ರೀತಿಯ ಭೇದ-ಭಾವ ಇಲ್ಲದೆ ಅಕ್ಷರ ದಾಸೋಹದಲ್ಲಿ ತೊಡಗಿದ್ದೇನೆ. ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣವನ್ನು ನೀಡದರೆ, ಸಂಸ್ಕೃತಿ, ಸಂಸ್ಕಾರಗಳ ಅರಿವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸುಸಂಸ್ಕೃತರಾಗಿ ಬೆಳೆದಾಗ ಮಾತ್ರ ಸಂಸ್ಥೆಯ ಉದ್ದೇಶ ಸಾರ್ಥಕತೆಯನ್ನು ಪಡೆಯಲು ಸಾಧ್ಯ. ಸಂಸ್ಥೆಯ ಕಾರ್ಯಕ್ರಮಗಳಿಗೆ ತುಳು-ಕನ್ನಡಿಗರ ಪ್ರೋತ್ಸಾಹ ಸದಾಯಿರಲಿ .
 ದಿವಾಕರ ಆರ್‌. ಸಾಲ್ಯಾನ್‌,  ಪ್ರಾಚಾರ್ಯರು, ದಿವಾಕರ್ ಕ್ಲಾಸಸ್‌ ಮೋಹನೆ 

Advertisement

Udayavani is now on Telegram. Click here to join our channel and stay updated with the latest news.

Next