Advertisement

ಬಿಜೆಪಿ ತಿಪ್ಪೆ ಸಾರಿಸುವುದಾದರೆ ದಿವ್ಯಾ ಹಾಗರಗಿ ಮೇಲೆ ಎಫ್ಐಆರ್ ಆಗುತ್ತಿರಲಿಲ್ಲ: ಸಿ.ಟಿ ರವಿ

01:24 PM Apr 29, 2022 | Team Udayavani |

ಚಿಕ್ಕಮಗಳೂರು: ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲೂ ಕಾಂಗ್ರೆಸ್ ಪಾತ್ರ ಇತ್ತು, ಅವರಿಗೆ ಹಣ, ವಕೀಲರ ನೇಮಕ ಎಲ್ಲ ಮಾಡಿದ್ದು ಕಾಂಗ್ರೆಸ್, ಆ ಸಂದರ್ಭದಲ್ಲಿ ಜಮೀರ್ ಅಹಮದ್ ಖಾನ್ ಹೆಸರು ಕೇಳಿ ಬಂದಿತ್ತು ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಜಮೀರ್ ಹೆಸರು ಹುಬ್ಬಳ್ಳಿ ಪ್ರಕರಣದಲ್ಲೂ ಕೇಳಿ ಬರುತ್ತಿದೆ. ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ. ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟುಕೊಳ್ಳಲು ಮುಂದಾಗಿದ್ದಾರೆ. ಗಲಭೆಕೋರರಿಗೆ ನೆರವು ಕೊಡುವ ಪಾತ್ರ ಕಾಂಗ್ರೆಸ್ ನದ್ದು ಇರಬಹುದು ಎಂಬ ಅನುಮಾನಕ್ಕೆ ಸಾಕ್ಷಿ ಒದಗಿಸುವ ರೀತಿ ಜಮೀರ್, ಕಾಂಗ್ರೆಸ್ ನಡುವಳಿಕೆ ಇದೆ ಎಂದರು.

ಹಿಜಾಬ್ ಹಿಂದೆ ಪಿಎಫ್ ಐ ಒಂದೇ ಅಲ್ಲ ಕಾಂಗ್ರೆಸ್ ಇದೆ ಅನ್ನೋ ಅನುಮಾನವಿತ್ತು. ಆಗ ಜಾತ್ಯತೀತಯ ಚಾಂಪಿಯನ್ ಎನಿಸಿಕೊಂಡವರು ಹಿಜಾಬ್ ಪರ ನಿಂತರು ವಕೀಲರಿಗೆ ನೆರವು ಕೊಟ್ಟಿದ್ದು ಕಾಂಗ್ರೆಸ್, ಅವರೆಲ್ಲಾ ಐದು- ಹತ್ತು ಸಾವಿರಕ್ಕೆ ಬರೋ ವಕೀಲರಲ್ಲ. ಎದ್ದು ನಿಂತರೆ 50 ಲಕ್ಷ ಬಿಲ್ ಮಾಡುವ ವಕೀಲರು. ಅವರೆಲ್ಲಾ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದ ವಕೀಲರು. ಹಿಜಾಬ್, ಪಾದರಾಯನಪುರ, ಡಿಜೆಹಳ್ಳಿ-ಕೆಜೆಹಳ್ಳಿ, ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ಪಾತ್ರ ಇರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ತಾನು ಕಳ್ಳ ಪರರ ನಂಬ ಎಂಬ ಮಾತು ಕಾಂಗ್ರೆಸ್ ಅನ್ವಯವಾಗುತ್ತದೆ. ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು, ಬಿಜೆಪಿಯೂ ಹಾಗೇ ಎಂದು ಭಾವಿಸಿದ್ದಾರೆ. ಬಿಜೆಪಿ ತಿಪ್ಪೆ ಸಾರಿಸುವುದಾಗಿದ್ದರೆ ದಿವ್ಯ ಹಾಗರಗಿ ಮೇಲೆ ಎಫ್ ಐಆರ್ ಆಗುತ್ತಿರಲಿಲ್ಲ ಎಂದರು.

ಇದನ್ನೂ ಓದಿ:ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ: ಸಚಿವ ಸುಧಾಕರ್

Advertisement

ಎಫ್ಐಆರ್ ಮಾಡಿದ್ದು, ಸಿಐಡಿಗೆ ವಹಿಸಿದ್ದು, ಆಕೆ ಗಂಡನನ್ನು ಬಂಧಿಸಿದ್ದು ಬಿಜೆಪಿ ಸರ್ಕಾರ. ಪ್ರಕರಣದಲ್ಲಿ ಇರುವ ಎಲ್ಲರನ್ನೂ ಬಂಧಿಸುತ್ತಿರುವುದು ಬಿಜೆಪಿ ಸರ್ಕಾರ. ಬಂಧನವಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತೇವೆ ಎಂದಿದ್ದು ಬಿಜೆಪಿ. ಯುಪಿ ಮಾದರಿಯಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಪೇಪರ್ ನೋಟಿಫಿಕೇಶನ್ ಕೊಟ್ಟಿದ್ದು ಬಿಜೆಪಿ. ಹಿಂದೆ ಅವರದ್ದೇ ಮುಖ್ಯಮಂತ್ರಿ ಮೇಲೆ ವಾಚ್ ಪ್ರಕರಣ ಬಂದಿತ್ತು. ಕಳ್ಳತನದ ವಾಚು, ಅಕ್ರಮದ ವಾಚು ಸಿಎಂ ಕೈಗೆ ಹೇಗೆ ಬಂತು ಎಂದು ತನಿಖೆಯ ಆಗಲಿಲ್ಲ ಎಂದರು.

ರಿಡ್ಯೂ ಹೆಸರಲ್ಲಿ ಅರ್ಕಾವತಿ ಭೂಹರಗದಲ್ಲಿ ಸಾವಿರಾರು ಎಕರೆ ಡಿನೋಟಿಫೈ ಮಾಡಿದರು. 10-20 ಲಕ್ಷ, ಕೆಲವಡೆ 50 ಲಕ್ಷ ಪಡೆದರು, ತನ್ನ ಕುತ್ತಿಗೆಗೆ ಬರುತ್ತದೆ ಎಂದು ಹಾಗೇ ತಿಪ್ಪೆ ಸಾರಿಸಿದರು. ಕೆಂಪಣ್ಣ ಆಯೋಗ ಕೂಡ ಕಾಂಗ್ರೆಸ್ ಪಾತ್ರವನ್ನು ಎತ್ತಿ ಹಿಡಿದಿತ್ತು. ಪ್ರಶಂಸೆ ಹೇಳುವ ಮನಸ್ಥಿತಿ ಅವರಿಗಿಲ್ಲ, ಕಾಂಗ್ರೆಸ್‍ನಂತೆ ಬಿಜೆಪಿ ಅಲ್ಲ. ಈ ವಿಷಯದಲ್ಲಿ ಯಾರೇ, ಎಷ್ಟೆ ಪ್ರಭಾವಶಾಲಿಗಳಿದ್ದರೂ ಶಿಕ್ಷೆ ಆಗುತ್ತೆ, ಮುಚ್ಚಿಹಾಕುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next