Advertisement

ದ.ಕ.: ಸರಕಾರಿ ವೈದ್ಯರ ಸಂಘದ ಪ್ರತಿಭಟನೆ

07:07 AM Sep 16, 2020 | mahesh |

ಮಂಗಳೂರು: ಸರಕಾರಿ ವೈದ್ಯಾಧಿಕಾರಿಗಳ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ವೈದ್ಯಾಧಿಕಾರಿ ಗಳ ಸಂಘ-ದ.ಕ. ಜಿಲ್ಲಾ ಶಾಖೆ ವತಿಯಿಂದ ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

Advertisement

ಬೇಡಿಕೆಗಳನ್ನು ಸರಕಾರ ಈಡೇರಿಸದ ಹಿನ್ನೆಲೆಯಲ್ಲಿ ಮಂಗಳವಾರದಿಂದ ವೈದ್ಯಾಧಿಕಾರಿಗಳ ಸಂಘದ ದ.ಕ. ಜಿಲ್ಲಾ ಶಾಖೆಯ ಎಲ್ಲ ವೈದ್ಯರು ತಾವು ಪರೀಕ್ಷಿಸಿದ ಎಲ್ಲ ವರದಿಗಳನ್ನು ತಡೆಹಿಡಿಯುವ ಮೂಲಕ ವಿನೂತನವಾಗಿ ಪ್ರತಿ ಭಟನೆ ಆರಂಭಿಸಿದ್ದಾರೆ. ಕೊರೊನಾ ಪಾಸಿಟಿವ್‌ ವರದಿ ಹೊರತುಪಡಿಸಿ ಇತರ ವರದಿ ತಡೆಹಿಡಿಯುವ ಪ್ರಕ್ರಿಯೆ ನಡೆಸಿದ್ದಾರೆ.

ಬೇಡಿಕೆ ಈಡೇರದಿದ್ದರೆ ಸೆ. 21ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಜತೆಗೆ ಸೆ. 21ರಂದು ಕೇಂದ್ರ ಸಂಘದ ನಿರ್ಧಾರದಂತೆ ಬೆಂಗಳೂರು ಚಲೋ ನಡೆಸಲಾಗುವುದು ಎಂದು ಸಂಘದ ಅಧ್ಯಕ್ಷ ಡಾ| ನವೀನ್‌ ಚಂದ್ರ ಕುಲಾಲ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next