Advertisement

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

11:51 PM Apr 27, 2024 | Team Udayavani |

ಬೆಂಗಳೂರು: ಸಹೋದರ (ಡಿ.ಕೆ. ಸುರೇಶ್‌) ಸೋತಂತೆ ಡಿ.ಕೆ. ಶಿವಕುಮಾರ್‌ ಅವರಿಗೆ ಕನಸು ಬಿದ್ದಿದೆ. ಅದಕ್ಕಾಗಿ ತಮಿಳುನಾಡು, ಉಡುಪಿಗೆ ಹೋಗಿ ಪೂಜೆ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವ್ಯಂಗ್ಯವಾಡಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಡಿ.ಕೆ. ಸುರೇಶ್‌ ಅವರನ್ನು ಎಂಎಲ್‌ಸಿ ಮಾಡುವುದು ಹೇಗೆಂಬ ಯೋಚನೆ ಅವರಿಗೆ ಶುರುವಾಗಿದೆ. ಸೋಲಿನ ಭೀತಿ ಉಂಟಾಗಿರುವುದರಿಂದಲೇ ಪ್ರಚಾರಕ್ಕೆ ಪದೇಪದೆ ಬೆಂಗಳೂರು ಗ್ರಾಮಾಂತರಕ್ಕೆ ಹೋಗಿದ್ದಾರೆ. ಫ‌ಲಿತಾಂಶದ ಮೊದಲೇ ನಾವು ಒಂದು ಸ್ಥಾನ ಗೆದ್ದಾಗಿದ್ದು, ಗ್ರಾಮಾಂತರದಲ್ಲಿ ಬಿಜೆಪಿಗೆ ಗೆಲ್ಲುವ ವಿಶ್ವಾಸ ಬರಲು ಸಿಎಂ ಸಿದ್ದರಾಮಯ್ಯನವರೇ ಕಾರಣ.

ಡಿ.ಕೆ. ಶಿವಕುಮಾರ್‌ ಸೋದರ ರನ್ನು ಮುಗಿಸಲು ಸಿಎಂ ಸಿದ್ದರಾಮಯ್ಯ ತಂತ್ರ ಮಾಡಿದ್ದಾರೆ. ಕಾಂಗ್ರೆಸ್‌ನವರೇ ಅವರ ಕಾಲ ಮೇಲೆ ಚಪ್ಪಡಿ ಎಳೆದುಕೊಳ್ಳುತ್ತಾರೆ. ಸಿದ್ದರಾಮಯ್ಯನವರಿಗೆ ವಿರೋಧಿ ಗಳನ್ನು ಹೇಗೆ ಮುಗಿಸಬೇಕೆಂಬುದು ಗೊತ್ತಿದೆ. ಅದಕ್ಕೆ ಉದಾಹರಣೆಯಾಗಿ ಡಾ| ಜಿ. ಪರಮೇಶ್ವರ್‌ ಇದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next