Advertisement

ಡಿ ಕೆ ರವಿ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಸೇರ್ಪಡೆ: ಏನಿದು ಕಾಂಗ್ರೆಸ್ ಹೊಸ ಪ್ಲ್ಯಾನ್?

01:30 PM Oct 04, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಅದರಲ್ಲೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿಷ್ಠೆಯ ಕಣವನ್ನಾಗಿಸಿರುವ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದೆ.

Advertisement

ಕಾಂಗ್ರೆಸ್ ಬಿಟ್ಟು ಕಮಲದ ಕೈ ಹಿಡಿದಿರುವ ಮಾಜಿ ಶಾಸಕ ಮುನಿರತ್ನ ಬಿಜೆಪಿಯಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಮುನಿರತ್ನಗೆ ಎದುರಾಗಿ ಹೊಸ ಕ್ಯಾಂಡಿಟೇಟ್ ನಿಲ್ಲಿಸಲು ಕಾಂಗ್ರೆಸ್ ಸಜ್ಜಾಗಿದೆ. ಅವರೇ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ.

ಕುಸುಮಾ ರವಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. ಆರ್. ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕುಸುಮಾ ರವಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆರ್.ಆರ್.ನಗರದಲ್ಲಿ ಸರ್ಪ್ರೈಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ಹಿಂದೆ ಹೇಳಿದ್ದು, ಆ ಸರ್ಪ್ರೈಸ್ ಕುಸುಮಾ ರವಿ ಅವರೇ ಎನ್ನಲಾಗಿದೆ.

ಇದನ್ನೂ ಓದಿ:ಅನುಶ್ರೀ ಬೆಂಬಲಕ್ಕೆ ನಿಂತ ಮಾಜಿ ಸಿಎಂ ಯಾರೆಂಬುದು ಬಹಿರಂಗವಾಗಲಿ: ಎಚ್ಡಿಕೆ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ ಮುಂತಾದವರು ಸೇರಿ ಅಭ್ಯರ್ಥಿಯ ಬಗ್ಗೆ ಅಂತಿಮ ನಿರ್ಧಾರ ಮಾಡಲಿದ್ದಾರೆ. ನಂತರ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮವಾಗಿ ಘೋಷಣೆ ಮಾಡಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next