Advertisement

ಮಾಜಿ ಸ್ಪೀಕರ್‌ ಕೆ.ಆರ್.ಪೇಟೆ ಕೃಷ್ಣ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

06:18 PM May 21, 2021 | Team Udayavani |

ಬೆಂಗಳೂರು: ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್.‌ಪೇಟೆ ಕೃಷ್ಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Advertisement

‘ಕೃಷ್ಣ ಅವರು ಸರಳ ಹಾಗೂ ಸಜ್ಜನ ರಾಜಕಾರಣದಿಂದ ಹೆಸರು ಮಾಡಿದವರು. ತಳಮಟ್ಟದಿಂದ ಜನ ನಾಯಕರಾಗಿ ಬೆಳೆದ ಕೃಷ್ಣ ಅವರು, ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಅವರ ಸೇವೆ ಸ್ಮರಣೀಯ. ವಿಧಾನಸಭೆ ಸ್ಪೀಕರ್ ಆಗಿ ಸಂಕಷ್ಟದ ಸಮಯದಲ್ಲಿ ಸದನವನ್ನು ಸಮರ್ಥವಾಗಿ ನಡೆಸಿದ್ದ ನಾಯಕರಾಗಿದ್ದರು. ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ತಮ್ಮದೇ ಆದ ರೀತಿಯಲ್ಲಿ ಛಾಪು ಮೂಡಿಸಿದ್ದರು ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ.

ಇದನ್ನೂ ಓದಿ :SSLC ಆನ್‌ಲೈನ್‌ ಕಿರು ಪರೀಕ್ಷೆಗೆ ಉತ್ತಮ ಪ್ರತಿಕ್ರಿಯೆ.. ಎಸ್‌.ಮಹೇಶ್‌

ಕೃಷ್ಣ ಅವರ ನಿಧನ ಮನಸ್ಸಿಗೆ ನೋವುಂಟು ಮಾಡಿದೆ. ಕೃಷ್ಣ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ನೀಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ. ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next