Advertisement

ಡಿಕೆಶಿಗೆ ಪಟ್ಟ: ಸಂಕಷ್ಟದಲ್ಲಿ ಹೈಕಮಾಂಡ್‌

10:59 AM Jan 09, 2020 | sudhir |

ಬೆಂಗಳೂರು: ಪಕ್ಷದಲ್ಲಿ ಹುದ್ದೆ ನೀಡುವ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಮಾತು ಕೊಟ್ಟು ಸಂಕಷ್ಟಕ್ಕೆ ಸಿಲುಕಿದೆ ಎಂಬ ಅಭಿಪ್ರಾಯ ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿವೆ.

Advertisement

ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜೈಲಿಗೆ ಹೋಗಿ, ವಾಪಸ್‌ ಬರುವಾಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಡಿಕೆಶಿ ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಶಿವಕುಮಾರ್‌ ಪಕ್ಷ ನಿಷ್ಠೆಗೆ ಸೂಕ್ತ ಸ್ಥಾನಮಾನ ನೀಡುವುದಾಗಿ ಸೋನಿಯಾ ಭರವಸೆ ನೀಡಿದ್ದರು ಎನ್ನಲಾಗಿದೆ.

ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ಶಾಸಕಾಂಗ ಪಕ್ಷದ ನಾಯಕ ಅಥವಾ ಸಿಡಬ್ಲ್ಯುಸಿ ಸದಸ್ಯ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್‌ ಲೆಕ್ಕಾಚಾರ ಹಾಕಿಕೊಂಡಿತ್ತು ಎನ್ನಲಾಗಿದೆ. ಆದರೆ ಶಿವ ಕುಮಾರ್‌ ಮಾತ್ರ ಕೆಪಿಸಿಸಿ ಅಧ್ಯಕ್ಷ ಸ್ಥಾನವೇ ಬೇಕೆಂದು ಪಟ್ಟು ಹಿಡಿ ದಿದ್ದ ರಿಂದ ಹೈಕಮಾಂಡ್‌ ಕೂಡ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲು ಒಲವು ತೋರಿದೆ. ಆದರೆ ಇದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಡ್ಡಿಯಾಗಿದ್ದಾರೆ ಎನ್ನಲಾಗುತ್ತಿದೆ.

ಹೊಸ ಹೆಸರು ಪ್ರಸ್ತಾವ
ಹೈಕಮಾಂಡ್‌ ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ರನ್ನಾಗಿ ನೇಮಿಸಲು ಒಲವು ವ್ಯಕ್ತಪಡಿಸಿದೆ ಎನ್ನುವ ಮಾಹಿತಿ ಬಂದ ತತ್‌ಕ್ಷಣ ಸಿದ್ದರಾಮಯ್ಯ ಬಣ ಸಕ್ರಿಯ ವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ತನ್ನ ಆಪ್ತರ ಹೆಸರುಗಳನ್ನು ಮುಂಚೂಣಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಸಿದ್ದು ಬಣದ ಆಕ್ಷೇಪಕ್ಕೆ ಕಾರಣ
ಶಿವಕುಮಾರ್‌ ಅವರ ವಿರುದ್ಧ ಅಕ್ರಮ ಹಣ ವರ್ಗಾ ವಣೆ ಆರೋಪ ಇದ್ದು, ಈಗಾಗಲೇ ಜೈಲು ವಾಸ ಮಾಡಿ ಬಂದಿದ್ದಾರೆ. ಅಲ್ಲದೆ ಸಿಬಿಐ ಕೂಡ ಅಕ್ರಮ ಹಣ ಹಾಗೂ ಆಸ್ತಿ ಸಂಪಾದನೆ ಕುರಿತು ತನಿಖೆ ನಡೆಸುವ ಸಾಧ್ಯತೆ ಇದೆ. ಒಂದು ವೇಳೆ ಶಿವಕುಮಾರ್‌ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಬಿಜೆಪಿಯವರು ರಾಜಕೀಯ ದ್ವೇಷದಿಂದ ಸಿಬಿಐ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡು ಅವರನ್ನು ಜೈಲಿಗೆ ಕಳುಹಿಸುವ ಪ್ರಸಂಗ ಉಂಟಾದರೆ ಪಕ್ಷದ ಅಧ್ಯಕ್ಷರೇ ಜೈಲಿಗೆ ಹೋಗಿದ್ದಾರೆ ಎನ್ನುವ ಆರೋಪ ಎದುರಿಸಬೇಕಾಗುತ್ತದೆ. ಆಗ ಪಕ್ಷ ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಬಹಿರಂಗವಾಗಿ ಹೋರಾಟ ಮಾಡಲು ಕಷ್ಟವಾದೀತು ಎನ್ನುವ ಆಕ್ಷೇಪ ವನ್ನು ಹೈಕಮಾಂಡ್‌ ಮುಂದೆ ಸಿದ್ದು ಬಣ ವ್ಯಕ್ತಪಡಿಸಿದೆ ಎನ್ನಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next