Advertisement
ದೆಹಲಿಯ ಅಪಾರ್ಟ್ಮೆಂಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 8.59 ಕೋಟಿ ರೂ. ಜಪ್ತಿ ಮಾಡಿದ್ದರು. ಈ ಹಣ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ್ದು ಎನ್ನಲಾಗಿದೆ.
Related Articles
Advertisement
ವಾದ-ಪ್ರತಿವಾದಇದಕ್ಕೂ ಮೊದಲು ಆದಾಯ ತೆರಿಗೆ ಇಲಾಖೆ ಪರ ವಾದ ಮಂಡಿಸಿದ ವಕೀಲ ಎ.ಎ.ಜಿ.ಪ್ರಭುಲಿಂಗ ನಾವಡಗಿ, ಐಟಿ ದಾಳಿ ವೇಳೆ ಕೋಟ್ಯಂತರ ರೂ. ಹಣ ಪತ್ತೆಯಾಗಿದ್ದು, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದರೆ, ದೇಶ ಬಿಟ್ಟು ಹೋಗಬಹುದು. ಅಂತಹ ಹತ್ತಾರು ಪ್ರಕರಣಗಳು ನಡೆದಿವೆ. ಉದ್ದೇಶಪೂರ್ವಕವಾಗಿಯೇ ಕೃತ್ಯವೆಸಗಿದ್ದಾರೆ. ಅಲ್ಲದೆ ವಿಚಾರಣೆ ಸಂದರ್ಭದಲ್ಲಿಯೂ ತಪ್ಪು ಮಾಹಿತಿ ನೀಡಿ, ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಿದ್ದಾರೆ. ಹೀಗಾಗಿ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪಿಸಿದ ಶಿವಕುಮಾರ್ ಪರ ವಕೀಲ ಶೇಷಾಚಲ, ಐಟಿ ಅಧಿಕಾರಿಗಳು ಜಪ್ತಿ ಮಾಡಿದ ಹಣಕ್ಕೆ ಸೂಕ್ತ ಲೆಕ್ಕ ಕೊಡಲು ನಮ್ಮ ಕಕ್ಷಿದಾರರು ಸಿದ್ದರಿದ್ದಾರೆ. 2018-19 ಆರ್ಥಿಕ ವರ್ಷದ ಲೆಕ್ಕಚಾರ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಈ ಸಾಲಿನ ವಹಿವಾಟಿನ ಬಗ್ಗೆ ಆಡಿಟಿಂಗ್ ನಡೆದಿಲ್ಲ. ಜತೆಗೆ ಇದು ಗಂಭೀರ ಪ್ರಕರಣ ಅಲ್ಲ. ಹೀಗಾಗಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು. ಕೈ ಮುಗಿದ ಸಚಿವರು
ಪ್ರಕರಣ ಸಂಬಂಧ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಚಿವ ಡಿ.ಕೆ.ಶಿವಕುಮಾರ್ ಖುದ್ದು ನ್ಯಾಯಾಲಯಕ್ಕೆ ಹಾಜರಾದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿತು. ಈ ಹಿನ್ನೆಲೆಯಲ್ಲಿ ಸಂತೋಷದಿಂದಲೇ ಕೋರ್ಟ್ ಆವರಣದಿಂದ ಹೊರಬಂದು ಸಚಿವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಕೈ ಮುಗಿದು ಹೊರಟರು.