Advertisement

ಶಿರಾ ಶಾಸಕ ಸತ್ಯನಾರಾಯಣ ಅವರ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ

11:39 AM Aug 05, 2020 | Mithun PG |

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ಶಾಸಕ ಬಿ.ಸತ್ಯನಾರಾಯಣ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

Advertisement

ಸತ್ಯನಾರಾಯಣ ಅವರು ರೈತರ ಪರ ವಿಶೇಷ ಕಾಳಜಿ ಹೊಂದಿದ್ದವರಾಗಿದ್ದು, ಅವರು ಹುಟ್ಟು ಹೋರಾಟಗಾರರಾಗಿದ್ದರು. ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ಮೃದು ಸ್ವಭಾವದ ಸಜ್ಜನ ವ್ಯಕ್ತಿಯಾಗಿದ್ದ ಸತ್ಯನಾರಾಯಣ ಅವರು ಅಗಲಿಕೆ ರಾಜಕೀಯ ಕ್ಷೇತ್ರ ಹಾಗೂ ನಾಡಿಗೆ ತುಂಬಲಾರದ ನಷ್ಟವಾಗಿದೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರು ಕುಟುಂಬ ಸದಸ್ಯರು, ಬಂಧುಗಳು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ’ ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next