Advertisement

ಡಿಕೆಶಿಗೆ ಬಿಜೆಪಿಯಿಂದ ಡೆಪ್ಯೂಟಿ ಸಿಎಂ ಆಮಿಷ

06:30 AM Oct 25, 2018 | Team Udayavani |

ರಾಮನಗರ: ಕಾಂಗ್ರೆಸ್‌ ತೊರೆದು 10 ಮಂದಿ ಶಾಸಕರನ್ನು ಜೊತೆಗೆ ಕರೆ ತಂದರೆ ಡೆಪ್ಯೂಟಿ ಸಿಎಂ ಮಾಡ್ತೀವಿ ಅಂತ ಬಿಜೆಪಿಯವರು ಡಿ.ಕೆ.ಶಿವಕುಮಾರ್‌ ಅವರಿಗೆ ಆಮೀಷ ಒಡ್ಡಿದ್ದರು ಎಂದು ಸಂಸದ ಡಿ.ಕೆ.ಸುರೇಶ್‌ ಆರೋಪಿಸಿದರು.

Advertisement

ಕಾಂಗ್ರೆಸ್‌-ಜೆಡಿಎಸ್‌ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಸಭಾ ಚುನಾವಣೆ ವೇಳೆ ಗುಜರಾತ್‌ನ ಕಾಂಗ್ರೆಸ್‌ ಶಾಸಕರನ್ನು ರಕ್ಷಿಸಿದ್ದಕ್ಕೆ ಡಿ.ಕೆ.ಶಿವಕುಮಾರ್‌ ವಿರುದ್ದ ಬಿಜೆಪಿ ಇಡಿ, ಐಟಿ ಇಲಾಖೆಗಳ ಮೂಲಕ ತೊಂದರೆ ಕೊಡುತ್ತಿದೆ. ಆದರೆ, ಏನೇ ಆದರೂ ಕಾಂಗ್ರೆಸ್‌ ತೊರೆಯುವುದಿಲ್ಲ. ಸಾರ್ವತ್ರಿಕ ಚುನಾವಣೆಯಲ್ಲಿ ಪರಾಜಿತಗೊಂಡ ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್‌ ಹುಸೇನ್‌ಗೂ ಬಿಜೆಪಿಯವರು ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸುವಂತೆ ಕರೆ ಮಾಡಿದ್ದರು. ಆದರೆ, ಅವರು ಸಹ ಈ ಕರೆಗೆ ಸ್ಪಂದಿಸಲಿಲ್ಲ ಎಂದರು.

ನನಗೂ, ಜೆಡಿಎಸ್‌ಗೂ ಎಣ್ಣೆ ಸೀಗೆಕಾಯಿ ಇದ್ದಂತೆ. ಜೆಡಿಎಸ್‌ ವಿರುದ್ಧ ರಾಜಕಾರಣ ಮಾಡಿಕೊಂಡೇ ತಾವು ಬಂದಿದ್ದು. ಪ್ರತಿ ಚುನಾವಣೆಯಲ್ಲೂ ಜೆಡಿಎಸ್‌, ಕುಮಾರಸ್ವಾಮಿ ವಿರುದ್ದ ಮಾತನಾಡಿದ್ದೇನೆ. ಆದರೆ, ರಾಷ್ಟ್ರದ ಹಿತದೃಷ್ಟಿಯಿಂದ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು, ಹೈಕಮಾಂಡ್‌ ಸೂಚನೆ ಮೇರೆಗೆ ರಾಮನಗರ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ.
– ಡಿ.ಕೆ.ಸುರೇಶ್‌, ಸಂಸದ.

Advertisement

Udayavani is now on Telegram. Click here to join our channel and stay updated with the latest news.

Next