Advertisement

Pavagada; ಸೋಲಾರ್‌ ಪಾರ್ಕ್‌ಗೆ ಡಿಕೆಶಿ, ಜಾರ್ಜ್‌ ಭೇಟಿ

09:17 PM Jun 14, 2023 | Team Udayavani |

ತುಮಕೂರು: ಪಾವಗಡ ತಾಲೂಕು ತಿರುಮಣಿಯಲ್ಲಿರುವ ಏಷ್ಯಾದ ಅತಿದೊಡ್ಡ ಸೋಲಾರ್‌ ಪಾರ್ಕ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ತಿರುಮಣಿಯಲ್ಲಿರುವ ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಗಮದ ಕಚೇರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಚಿವರು ಇಲಾಖೆಯಿಂದ ನೀಡಿದ ಪ್ಲಾಂಟೇಷನ್‌ ವೀಕ್ಷಿಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೋಲಾರ್‌ ಪಾರ್ಕ್‌ನಲ್ಲಿ ವಿದ್ಯುತ್‌ ಉತ್ಪಾದನೆ, ರೈತರ ಜಮೀನಿನ ಬಾಡಿಗೆ ಪಾವತಿ ಸೇರಿದಂತೆ ಎಲ್ಲ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿದರು.

ಬಿಬಿಎಂಪಿ ಸಭೆಗೂ ಸುರ್ಜೇವಾಲಾಗೂ ಸಂಬಂಧವಿಲ್ಲ
ತುಮಕೂರು: ಬಿಬಿಎಂಪಿ ಸಭೆಗೂ, ಸುರ್ಜೇವಾಲಾ ಅವರಿಗೂ ಯಾವುದೇ ಸಂಬಂಧ ಇಲ್ಲ. ನಾನು ಸಹ ಯಾವುದೇ ಸಭೆ ನಡೆಸಿಲ್ಲ. ಈ ಬಗ್ಗೆ ಯಾರಿಗೆ ಬೇಕಾದರೂ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಿಜೆಪಿಗೆ ತಿರುಗೇಟು ನೀಡಿದರು.

ನಾನು ಸಿಟಿ ರೌಂಡ್ಸ್‌ನಲ್ಲಿದ್ದಾಗ ನನ್ನನ್ನು ಕರೆದುಕೊಂಡು ಹೋಗಲು ಸುಜೇìವಾಲಾ ಅವರು ಬಂದಿದ್ದರು. ಆ ಸಂದರ್ಭದಲ್ಲಿ ನಾನು ಮತ್ತು ಅವರು ಕಾಫಿ ಕುಡಿಯಲು ಬಂದಿದ್ದೆವು ಅಷ್ಟೆ. ಅವರಿಗೂ ಅಧಿಕಾರಿಗಳು ಮತ್ತು ಸಭೆಗೂ ಯಾವುದೇ ಸಂಬಂಧ ಇಲ್ಲ. ನಾನು ಸಹ ಯಾವುದೇ ಸಭೆ ಮಾಡಿಲ್ಲ. ಯಾರು ಯಾರಿಗೆ ಬೇಕಾದರೂ ದೂರು ಕೊಡಲಿ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next