Advertisement

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

09:14 PM May 03, 2024 | Team Udayavani |

ಯಾದಗಿರಿ: ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಸಿಡಿ ಮಾಡುವುದರಲ್ಲಿ ಭಾರೀ ನುರಿತವರಿದ್ದಾರೆ. ಇಂತವರನ್ನು ಪಕ್ಕದಲ್ಲಿ ಇಟ್ಟುಕೊಂಡು ಓಡಾಡುವುದು ಮಾಡಬಾರದು. ಹಿಂದೆ ರಮೇಶ ಜಾರಕಿಹೋಳಿ ಅವರ ಸಿಡಿ ಮಾಡಿಸಿ ಅವರನ್ನು ಮನೆಗೆ ಕಳುಹಿಸಿದ್ದರು ಎಂದು ಮಾಜಿ ಸಚಿವ ಹಾಗೂ ಸುರಪುರ ವಿಧಾನಸಭೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರು ಟೀಕಿಸಿದರು.

Advertisement

ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಸುರಪುರ ವಿಧಾನಸಭೆ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಅವರು ತುಂಬಾ ಜಾಣರಾಗಿದ್ದು, ನೇರ ಸಿದ್ದರಾಮಯ್ಯನವರ ಸಿಎಂ ಸೀಟಿನ ಮೇಲೆ ಕಣ್ಣಿಟ್ಟಿದ್ದಾರೆ, ಅದಕ್ಕೆ ಡಿಕೆಶಿ ಅವರು ಏನು ಬೇಕಾದರು ಮಾಡೋದಕ್ಕೆ ತಯಾರಾಗಿದ್ದಾರೆ ಎಂದರು.

ಲೋಕಸಭೆ ಚುನಾವಣೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಿಡಿಯನ್ನು ಸಹ ಡಿಕೆಶಿ ಅವರು ಬಿಟ್ಟರೆ ಬಿಡಬಹುದು ಅಥವಾ ಯತೀಂದ್ರ ಅವರ ಸಿಡಿ ಬಿಡಬಹುದು ಎಂದು ವ್ಯಂಗ್ಯವಾಡಿದರು.

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ ಡಿಕೆಶಿ ಅವರಿಂದ ಹುಷಾರಾಗಿರಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next