Advertisement

ಬಿಜೆಪಿ ಸರ್ಕಾರ ಬೆಂಗಳೂರಿನ ಘನತೆ ಉಳಿಸಿಕೊಳ್ಳಬೇಕು- ಡಿಕೆಶಿ

09:12 PM May 19, 2022 | Team Udayavani |

ಬೆಂಗಳೂರು: ಬಿಜೆಪಿ ಸರ್ಕಾರ ಬೆಂಗಳೂರು ನಗರಕ್ಕಿರುವ ಘನತೆ, ಗೌರವವನ್ನು ಉಳಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ತಾನು ಸರ್ವ ಸ್ಪರ್ಷಿ ಹಾಗೂ ಸರ್ವ ವ್ಯಾಪಿ ಬಜೆಟ್‌ ಮಂಡಿಸಿದ್ದೇವೆ ಎಂದು ಹೇಳಿಕೊಂಡರು. ಆದರೆ ತಾವು ಘೋಷಿಸಿದ ಬಜೆಟ್‌  ಸರಿಯಾಗಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಹೊಣೆಯಾರು ಎಂದು ಪ್ರಶ್ನಿಸಿದರು.

ಕೇಂದ್ರ ಬಜೆಟ್‌ ನಲ್ಲಿ ಬೆಂಗಳೂರು ನಗರ ಅಥವಾ ರಾಜ್ಯಕ್ಕೆ ಏನಾದರೂ ಕೊಡುಗೆ ಬಂದಿದೆಯಾ. ಈಗ ಮಳೆ ಬಂದು ಅವಾಂತರವಾದ ನಂತರ ಬಿಜೆಪಿಯವರು ಛತ್ರಿ ಹಿಡಿದುಕೊಂಡು ಸಿಟಿ ರೌಂಡ್ಸ್‌ ಹಾಕುತ್ತಿದ್ದೇನೆ ಎಂದರೆ ಹೇಗೆ ಎಂದರು.

ನಮ್ಮ ಬಡಾವಣೆಯಲ್ಲಿ ಚೆನ್ನಾಗಿರುವ ರಸ್ತೆಯನ್ನು ಕಿತ್ತು ಮತ್ತೆ ಬೇರೆ ರಸ್ತೆ ಹಾಕುತ್ತಿದ್ದಾರೆ. ಆದರೆ ಗುಂಡಿ ಬಿದ್ದಿರುವ ರಸ್ತೆಯನ್ನು ಸರಿಪಡಿಸುತ್ತಿಲ್ಲ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next