Advertisement

ತಳ್ಳಿದ್ದರೆ ವಿಷಾದ ವ್ಯಕ್ತಪಡಿಸುವೆ: ಬಿ.ಆರ್‌.ಪಾಟೀಲ್‌ಗೆ ಡಿಕೆಶಿ

09:31 PM Mar 10, 2022 | Team Udayavani |

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಶಾಸಕ ಬಿ.ಆರ್‌.ಪಾಟೀಲ್‌ ಅವರಲ್ಲಿ ವಿಷಾದ ಕೋರಿದ್ದಾರೆ.

Advertisement

ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂತಹ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗ್ಗಲಿನಲ್ಲಿ ಅಂತಹ ಅಚಾತುರ್ಯ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮಂತಹ ಹಿರಿಯ ನಾಯಕರಿಗೆ ಅವಮಾನ ಮಾಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಪಾಟೀಲ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷದ ಹಿರಿಯ ಮುಖಂಡರ ಆದೇಶದ ಹಿನ್ನೆಲೆಯಲ್ಲಿ ನಾನು ಗೋವಾದಲ್ಲಿದ್ದು, ಅಲ್ಲಿಂದ ಮರಳಿದ ಬಳಿಕ ನಿಮ್ಮನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next