Advertisement

ಬಿಲ್ ಹರಿದು ಹಾಕಿದ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಯಡಿಯೂರಪ್ಪ ಒತ್ತಾಯ

10:11 AM Dec 23, 2021 | Team Udayavani |

ಸುವರ್ಣಸೌಧ (ಬೆಳಗಾವಿ): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೋಪದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಹರಿದು ಬಿಸಾಕಿದ್ದಾರೆ. ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಇವತ್ತು ಮಂಡನೆಯಾಗುತ್ತಿದೆ. ಇದನ್ನು ಸರ್ವಾನುಮತದಿಂದ ಜಾರಿ ಮಾಡಬೇಕಿದೆ ಎಂದರು.

ಇದನ್ನೂ ಓದಿ:ಜೆಡಿಎಸ್‌ನಿಂದ ಜೀವನದಿ ಉಳಿಸುವ ಸಂಕಲ್ಪ ಯಾತ್ರೆ

ಡಿ ಕೆ ಶಿವಕುಮಾರ್ ಅವರು ಯಾವ ರೀತಿ ಹರಿದು ಬೀಸಾಕಿದರೋ, ಅದೇ ರೀತಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಹರಿದು ಹಾಕಿದ್ದಾರೆ. ನಾವುಗಳು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡಬಾರದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next