Advertisement

ಬಿಎಸ್ ವೈ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಎಲ್ಲಿದೆ ಆ್ಯಂಬುಲೆನ್ಸ್? ಡಿಕೆ ಶಿವಕುಮಾರ್ ಗುಡುಗು

04:40 PM Aug 17, 2020 | keerthan |

ಬೆಂಗಳೂರು: ಆ್ಯಂಬುಲೆನ್ಸ್ ಸಿಗದ ಕಾರಣ ಕಿತ್ತೂರಿನಲ್ಲಿ 70 ವರ್ಷದ ವೈದ್ಧನ ಶವವನ್ನು ಸೈಕಲ್ ನಲ್ಲಿ ಸಾಗಿಸಿದ ಘಟನೆಯ ಬಗ್ಗೆ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯ ಕಿತ್ತೂರಿನ 70 ವರ್ಷದ ವೃದ್ಧನ ಶವವನ್ನು ಕುಟುಂಬ ಸದಸ್ಯರು ಮಳೆಯಲ್ಲಿ ನೆನೆಯುತ್ತಾ ಸೈಕಲ್ ನಲ್ಲಿ ಸಾಗಿಸಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಅವರೇ ಎಲ್ಲಿದೆ ನಿಮ್ಮ ಸರ್ಕಾರ? ಅವರಿಗೆ ಏಕೆ ಆಂಬ್ಯುಲೆನ್ಸ್ ಒದಗಿಸಲಿಲ್ಲ? ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿ ಅಸುನೀಗಿದ್ದರು. ಆದರೆ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೇಳಿಕೊಂಡರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎನ್ನಲಾಗಿದೆ. ನಂತರ ಮೃತನ ಪುತ್ರ ಮತ್ತು ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು ಸ್ಮಶಾನದವರೆಗೆ ಸೈಕಲ್ ನಲ್ಲೇ ಕೊಂಡಯೊಯ್ದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next