Advertisement

ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಅದು ವಿಫಲವಾಗಿದೆ: ಡಿ.ಕೆ.ಶಿವಕುಮಾರ್

03:05 PM Sep 26, 2022 | Team Udayavani |

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ರೋಗಿಗಳು, ರೈತರು, ಕಾರ್ಮಿಕರಿಗೆ ರಕ್ಷಣೆ ಇಲ್ಲವಾಗಿದೆ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬಂತೆ ಅದು ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

Advertisement

ಕಾನೂನು ಸಚಿವರು ನಾವು ಸರ್ಕಾರದಲ್ಲಿ ಆಡಳಿತ ನಡೆಸುತ್ತಿಲ್ಲ, ಕೇವಲ ಸರ್ಕಾರವನ್ನು ತಳ್ಳುತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಈ ಸರ್ಕಾರದಿಂದ ಜನರ ರಕ್ಷಣೆ ಅಸಾಧ್ಯವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

‘’ಕಾಂಗ್ರೆಸ್ ಲಿಂಗಾಯತ ಸಿಎಂ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ‘ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೇವಲ ಲಿಂಗಾಯತ ಜಾತಿ ಮೇಲೆ ಸಿಎಂ ಆಗಿದ್ದಾರಾ? ಸಂವಿಧಾನದ ಪ್ರಕಾರ ಅವರು ಸಿಎಂ ಆಗಿದ್ದಾರೆ. ನಾವು ಸರ್ಕಾರವನ್ನು ಟಾರ್ಗೆಟ್ ಮಾಡುತ್ತಿದ್ದೇವೆ. ಸಿಎಂ ಆದವರು ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಸರ್ಕಾರದ ವೈಫಲ್ಯಗಳನ್ನು ಇಟ್ಟುಕೊಂಡಷ್ಟೇ ಅವರನ್ನು ಗುರಿ ಮಾಡುತ್ತಿದ್ದೇವೆ. ಇದರಲ್ಲಿ ಜಾತಿ ಪ್ರಶ್ನೆಯೇ ಇಲ್ಲ’’ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:ಭಾರತದ ಬಗ್ಗೆ ಅಪಪ್ರಚಾರ: ಅಮೆರಿಕದ ಮಾಧ್ಯಮಗಳ ವಿರುದ್ಧ ಸಚಿವ ಜೈಶಂಕರ್ ಆಕ್ರೋಶ

Advertisement

Udayavani is now on Telegram. Click here to join our channel and stay updated with the latest news.

Next