Advertisement

ಡಿಕೆ ಶಿವಕುಮಾರ್ ಗೆ ಇನ್ನೂ ಹತ್ತು ದಿನ ಜೈಲೇ ಗತಿ; ಅ.24ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

09:32 AM Oct 16, 2019 | Nagendra Trasi |

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ವಿಶೇಷ ಕೋರ್ಟ್ ಮಂಗಳವಾರ ಆದೇಶ ನೀಡಿದ್ದು, ಇದರಿಂದ ಇನ್ನೂ ಹತ್ತು ದಿನಗಳ ಕಾಲ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ.

Advertisement

ಡಿಕೆ ಶಿವಕುಮಾರ್ ನ್ಯಾಯಾಂಗ ಬಂಧನ ಮಂಗಳವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಿದ್ದರು.

ತಿಹಾರ್ ಜೈಲಿನ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸುವಂತೆ ಇ.ಡಿ. ಪರ ವಕೀಲರು ಮನವಿ ಮಾಡಿಕೊಂಡಿದ್ದು, ನ್ಯಾಯಾಧೀಶರು ಅ.25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next