Advertisement

ನನಗಿರುವುದು ಒಬ್ಬಳೆ ಹೆಂಡತಿ ಒಂದೇ ಸಂಸಾರ: ಡಿ. ಕೆ ಶಿವಕುಮಾರ್

04:23 PM Mar 24, 2021 | Team Udayavani |

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ವಿವಾದವನ್ನು ಸೃಷ್ಟಿಸಿರುವ ಸಿ.ಡಿ ಪ್ರಕರಣ  ಇದೀಗ ರಾಜಕಾರಣಿಗಳ ಪರಸ್ಪರ ಕಿತ್ತಾಟಕ್ಕೆ ಕಾರಣವಾಗಿದೆ.

Advertisement

ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ಸುಧಾಕರ್, ಎಲ್ಲರೂ ಏಕಪತ್ನಿ ವ್ರತಸ್ಥರಾ? 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿ ವಿವಾದಕ್ಕೀಡಾಗಿದ್ದಾರೆ.

ರಮೇಶ್ ಕುಮಾರ್, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಬಿ.ಮುನಿಯಪ್ಪ ಹಾಗೂ ಕುಮಾರಸ್ವಾಮಿಯವರು ಸತ್ಯಹರಿಶ್ಚಂದ್ರರಲ್ಲವೇ? ಏಕ ಪತ್ನಿ ವ್ರತಸ್ಥರಾಗಿ ಸಮಾಜಕ್ಕೆ ಮಾದರಿಯಾಗಿದ್ದಾರಲ್ಲವೇ? ಆದರೆ 224 ಶಾಸಕರ ಬಗ್ಗೆಯೂ ತನಿಖೆಯಾಗಲಿ, ಎಲ್ಲರ ಬಂಡವಾಳ ಬಯಲಿಗೆ ಬರಲಿ ಎಂದು ಸುಧಾಕರ್ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:ಎಲ್ಲರೂ ಏಕಪತ್ನಿ ವ್ರತಸ್ಥರಾ?; 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಲಿ: ಸುಧಾಕರ್

ಆರೋಗ್ಯ ಸಚಿವ ಸುಧಾಕರ್ ಈ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್, ನನಗಿರುವುದು ಒಬ್ಬಳೆ ಹೆಂಡತಿ ಒಂದೇ ಸಂಸಾರ ಎಂದಿದ್ದಾರೆ.

Advertisement

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಡಿ. ಕೆ ಶಿವಕುಮಾರ್ ಇದೊಂದು ಸಾಮೂಹಿಕವಾಗಿರುವ ವಿಚಾರವಾಗಿದ್ದು ಇದನ್ನು ಎಲ್ಲಾ ಹಿರಿಯ ನಾಯಕರ ಸಮ್ಮುಖದಲ್ಲಿ ಸದನದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next