Advertisement

ಉಪ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ರ ಅನುಕಂಪದ ಗಿಮಿಕ್ ನಡೆಯಲ್ಲ: ಶ್ರೀರಾಮುಲು

04:20 PM Oct 17, 2020 | keerthan |

ಚಿತ್ರದುರ್ಗ: ಉಪ ಚುನಾವಣೆಯಲ್ಲಿ ಅನುಕಂಪ ಸೃಷ್ಟಿಸಿಕೊಂಡು ಗೆಲ್ಲುವ ಡಿಕೆ ಶಿವಕುಮಾರ್ ಯತ್ನ ವಿಫಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

Advertisement

ಹಿರಿಯೂರಿನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಚಿದಾನಂದ ಗೌಡ ಪರ ಮತಯಾಚನೆ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.

ನೀತಿ ಸಂಹಿತೆ ವಿಚಾರವಾಗಿ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳಲಿದೆ. ಸೇಡಿನ ರಾಜಕಾರಣವಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಲುವ ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಮಿನಿ ವಿಧಾನಸೌಧಕ್ಕಿಲ್ಲ ಉದ್ಘಾಟನೆ ಭಾಗ್ಯ

ವಿಧಾನ ಪರಿಷತ್ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಆಗ್ನೇಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಪತಿ ಶ್ರೀನಿವಾಸ್ ಸ್ಪರ್ಧೆ ಕುರಿತು ಪಕ್ಷದ ವರಿಷ್ಟರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರವಾಗಿ ಸರ್ಕಾರದ ಹಂತದಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next