Advertisement

DK Shivkumar: ಬಿಎಸ್‌ವೈ ಕಣ್ಣೀರು ಹಾಕ್ಕಿದ್ದೇಕೆ ಎಂಬುದನ್ನು ಹೇಳಲಿ: ಡಿಕೆಶಿ

10:57 PM Apr 11, 2024 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಈ ಹಿಂದೆ ಕಣ್ಣೀರು ಹಾಕಿದ್ದು ಯಾಕೆ ಎಂಬುದನ್ನು ಹೇಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆಗೆ ಮಾತನಾಡಿ, ಯಡಿಯೂರಪ್ಪ ಎಚ್‌ಎಎಲ್‌ ಮತ್ತಿತರ ವಿಷಯ ಬಗ್ಗೆ ಮಾತನಾಡುವ ಮೂಲಕ ವಿಷಯಾಂತರ ಮಾಡುವುದು ಬೇಡ. ರಾಜ್ಯದ ಬರ ಪರಿಹಾರ ವಿಚಾರವಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿಕೆ, ನಮ್ಮ ಬೇಡಿಕೆ, ನರೇಗಾ ಯೋಜನೆ ಅಡಿ ಕೂಲಿ ದಿನಗಳ ಸಂಖ್ಯೆ ಹೆಚ್ಚಳ, ತೆರಿಗೆ ಹಂಚಿಕೆ ಅನ್ಯಾಯ ಕುರಿತು ಮಾತನಾಡಲಿ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ನಂಬಿಕಸ್ಥ ನಾಯಕರಿಲ್ಲ, ಹೀಗಾಗಿ ರಾಹುಲ್‌ ಗಾಂಧಿ ಹೆಸರಲ್ಲಿ ಮತ ಕೇಳುತ್ತಿಲ್ಲ ಎಂಬ ಯಡಿಯೂರಪ್ಪ ಹೇಳಿಕೆ ಬಗ್ಗೆ ಕೇಳಿದಾಗ, ಸ್ವತಃ ಪ್ರಧಾನಿ ಮೋದಿ ತಮ್ಮ ಹೆಸರು ಹೇಳಿ ಮತ ಕೇಳಲಿಲ್ಲ. ಶಿವಮೊಗ್ಗಕ್ಕೆ ಬಂದಿದ್ದಾಗ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಮತ ಕೊಡಿ ಎಂದರೆ ಹೊರತು, ತಮಗೆ ಕೊಡಿ ಎಂದು ಕೇಳಲೇ ಇಲ್ಲ. ಮೋದಿ ಅವರಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ ಎಂದು ತಿರುಗೇಟು ನೀಡಿದರು.

ಕಾಂಗ್ರೆಸಿಗರು ಎಸ್‌.ಟಿ. ಸೋಮಶೇಖರ್‌ ಹಾಗೂ ಶಿವರಾಮ ಹೆಬ್ಟಾರ್‌ ಅವರನ್ನು ಕಾಂಗ್ರೆಸ್‌ಗೆ ಕರೆದುಕೊಂಡಿದ್ದಾರೆ ಎಂದು ಕೇಳಿದಾಗ, ನಾನು ಅವರನ್ನು ಎಲ್ಲಿ ಸೇರಿಸಿಕೊಂಡಿದ್ದೇನೆ? ಅವರು ತಮ್ಮ ಕ್ಷೇತ್ರದ ವಿಚಾರವಾಗಿ ನಮ್ಮ ಜತೆ ಚರ್ಚೆ ಮಾಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next