Advertisement

ಡಿಕೆಶಿಗೆ ಜಾಮೀನು: ಚಿಕ್ಕಬಳ್ಳಾಪುರದಲ್ಲಿ ಕೈ ಕಾರ್ಯಕರ್ತ ಸಂಭ್ರಮಾಚರಣೆ

09:59 AM Oct 24, 2019 | Team Udayavani |

ಚಿಕ್ಕಬಳ್ಳಾಪುರ: 50 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಸ್ವಾಗತಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮ ಆಚರಿಸಿದರು

Advertisement

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಡಿಕೆಶಿ ಪರ ಘೋಷಣೆಗಳನ್ನ ಕೂಗಿದರು.

ಇಡಿ ವಿರುದ್ದ ದಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ ಪರ ಜೈಕಾರಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಯಲುವಹಳ್ಳಿ ರಮೇಶ್, ನಂದಿ ಅಂಜನಪ್ಪ, ಅಡ್ಡಗಲ್ ಶ್ರೀಧರ್, ಜಿ.ಆರ್.ಶ್ರೀನಿವಾಸ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next