Advertisement

ಡಿಕೆಶಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

06:00 AM Sep 19, 2018 | Team Udayavani |

ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲಬುರಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಂಗಳವಾರ ಬೆಳಗ್ಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವಾಗ ವಿಮಾನದಲ್ಲಿ ನೀಡಿದ ಸಿದ್ಧಪಡಿಸಿದ ಆಹಾರ (ಸ್ಯಾಂಡ್‌ ವಿಚ್‌) ಸೇವನೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ. ಅಲ್ಲಿಂದ ತಮ್ಮ ಬೆಂಗಳೂರಿನ ನಿವಾಸಕ್ಕೆ ಆಗಮಿಸಿ, ಬಳಿಕ,
ಸ್ವಕ್ಷೇತ್ರ ಕನಕಪುರದ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಹೊಟ್ಟೆ ನೋವು ಹೆಚ್ಚಾಗಿ, ಆರೋಗ್ಯದಲ್ಲಿ ತೀವ್ರ ಏರುಪೇರಾಯಿತು. ಹೀಗಾಗಿ, ತಮ್ಮ ಕನಕಪುರ ನಿವಾಸಕ್ಕೆ ತೆರಳಿ ವಿಶ್ರಾಂತಿ ಪಡೆದರು. ನಂತರ ಸಂಜೆ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದು, ತಜ್ಞ ವೈದ್ಯರು
ಅವರ ನಿವಾಸಕ್ಕೆ ಆಗಮಿಸಿ ಚಿಕಿತ್ಸೆ ನೀಡಿದ್ದರು. ತೀವ್ರ ಬಳಲಿದಂತಾಗಿದ್ದರಿಂದ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ, ರಾತ್ರಿ ವೇಳೆ ಹೊಟ್ಟೆ ನೋವು ಹೆಚ್ಚಾದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next