ಸ್ವಕ್ಷೇತ್ರ ಕನಕಪುರದ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಹೊಟ್ಟೆ ನೋವು ಹೆಚ್ಚಾಗಿ, ಆರೋಗ್ಯದಲ್ಲಿ ತೀವ್ರ ಏರುಪೇರಾಯಿತು. ಹೀಗಾಗಿ, ತಮ್ಮ ಕನಕಪುರ ನಿವಾಸಕ್ಕೆ ತೆರಳಿ ವಿಶ್ರಾಂತಿ ಪಡೆದರು. ನಂತರ ಸಂಜೆ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದು, ತಜ್ಞ ವೈದ್ಯರು
ಅವರ ನಿವಾಸಕ್ಕೆ ಆಗಮಿಸಿ ಚಿಕಿತ್ಸೆ ನೀಡಿದ್ದರು. ತೀವ್ರ ಬಳಲಿದಂತಾಗಿದ್ದರಿಂದ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ, ರಾತ್ರಿ ವೇಳೆ ಹೊಟ್ಟೆ ನೋವು ಹೆಚ್ಚಾದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement