Advertisement

DK Shivkumar: ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆ ಪ್ರತಿನಿಧಿಯೇನೂ ಅಲ್ಲ: ಡಿಕೆಶಿ ತಿರುಗೇಟು

03:43 PM Oct 14, 2023 | Team Udayavani |

ಬೆಂಗಳೂರು: ಐಟಿ ದಾಳಿ ವಿಚಾರವಾಗಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

Advertisement

ಐಟಿ ದಾಳಿ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪದ ಬಗ್ಗೆ ಮಾತನಾಡಿದ ಅವರು “ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಮುಂದೆ ರಾಜ್ಯದಲ್ಲಿ ನಡೆಯಲಿರುವ ಐಟಿ ದಾಳಿಗಳು ಕುಮಾರಸ್ವಾಮಿ ಹಾಗೂ ಬಿಜೆಪಿ ಪ್ರೇರಿತ ದಾಳಿಯಾಗಲಿವೆಯೇ ಎಂದು ಕೇಳಿಡಾ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಈ ಹಿಂದೆ ಯಡಿಯೂರಪ್ಪ ಅವರ ಕಾಲದಲ್ಲಿ ಏನಾಯ್ತು? ಆಗ ಅವರಿಗೆ ಏನು ಸಿಕ್ಕಿದೆ? ಎಲ್ಲವೂ ದಾಖಲೆಗಳಲ್ಲಿ ಇವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದ ನಂತರ ಮಾತನಾಡೋಣ” ಎಂದರು.

ಇದನ್ನೂ ಓದಿ: Leo Movie: ಲಿಯೋದಿಂದ ಬಂತು ಪ್ರೀತಿಯ ಆಯುಧ

Advertisement

Udayavani is now on Telegram. Click here to join our channel and stay updated with the latest news.

Next