Advertisement

ರಾಮಲಿಂಗಾರೆಡ್ಡಿ ಜತೆ ಫರೀದ್ ಫೋಟೋ ವೈರಲ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

01:56 PM Nov 08, 2018 | Team Udayavani |

ಬೆಂಗಳೂರು:ಜನಾರ್ದನ್ ರೆಡ್ಡಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ತೀವ್ರ ಶೋಧ, ವಿಚಾರಣೆ ನಡೆಸುತ್ತಿರುವ ನಡುವೆಯೇ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಗುರುವಾರ ಪ್ರತಿಕ್ರಿಯೆ ನೀಡಿದ್ದು, ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ ಎಂದು ತಿಳಿಸಿದ್ದಾರೆ.

Advertisement

ರೆಡ್ಡಿ ಡೀಲ್ ವಿಚಾರದ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಕರಣ ತನಿಖಾ ಹಂತದಲ್ಲಿ ಇರುವುದರಿಂದ ಹೆಚ್ಚು ಮಾತನಾಡಲ್ಲ. ಕಾನೂನು ಪ್ರಕಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ನಾವು ಇದರಲ್ಲಿ ಯಾವ ರೀತಿಯಲ್ಲೂ ಹಸ್ತಕ್ಷೇಪವಾಗಲಿ, ರಾಜಕೀಯವಾಗಲಿ ಮಾಡಲ್ಲ. ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಈ ವೇಳೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಜೊತೆ ಆರೋಪಿ ಫರೀದ್ ಫೋಟೋ ವೈರಲ್ ಆದ ಬಗ್ಗೆ ಪ್ರಶ್ನಿಸಿದಾಗ, ನಮ್ಮನ್ನು ಭೇಟಿಯಾಗಲು ಪ್ರತಿದಿನ ನೂರಾರು ಜನರು ಬರುತ್ತಾರೆ. ನಮ್ಮನ್ನು ಭೇಟಿಯಾಗಲು ಬರುವವರೆಲ್ಲ ಅಪರಾಧ ಮಾಡಿರುತ್ತಾರೆ ಎಂದು ಹೇಗೆ ಗೊತ್ತಾಗುತ್ತೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷಕ್ಕೂ ಆರೋಪಿಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next