Advertisement

ಇ.ಡಿ.ಯಿಂದ ಡಿ.ಕೆ.ಸುರೇಶ್‌ ವಿಚಾರಣೆ

11:49 AM Oct 05, 2019 | sudhir |

ಹೊಸದಿಲ್ಲಿ: ಕರ್ನಾಟಕದ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸಹೋದರ ಡಿ.ಕೆ. ಸುರೇಶ್‌ ಅವರು ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ.) ಕಚೇರಿಗೆ ವಿಚಾರಣೆಗೆ ಹಾಜರಾದರು.

Advertisement

ಈ ಹಿಂದೆ ಕಾಂಗ್ರೆಸ್‌ ಹೈಕಮಾಂಡ್‌ನ‌ಲ್ಲಿರುವ ಕೆಲವು ನಾಯಕರಿಗೆ ಹವಾಲಾ ಮಾರ್ಗಗಳ ಮೂಲಕ ಬೆಂಗಳೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಸಂಸದರೂ ಆಗಿರುವ ಸುರೇಶ್‌ ಹಣ ಸಂದಾಯ ಮಾಡಿರುವ ಆರೋಪಗಳು ಕೇಳಿಬಂದಿದ್ದವು. ಅದರ ಜತೆಗೆ 2019ರ ಲೋಕಸಭಾ ಚುನಾವಣೆ ವೇಳೆ ಸುರೇಶ್‌ ಅವರು ಘೋಷಿಸಿಕೊಂಡಿದ್ದ ಆಸ್ತಿಯ ಮೊತ್ತ (338 ಕೋ. ರೂ.), 2014ರ ಚುನಾವಣೆ ವೇಳೆ ಘೋಷಿಸಿಕೊಂಡಿದ್ದ ಆಸ್ತಿಯ ಮೊತ್ತಕ್ಕಿಂತ (85 ಕೋ. ರೂ.) ಸುಮಾರು 4 ಪಟ್ಟು ಹೆಚ್ಚಾಗಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್‌ ಅವರನ್ನು ಕರೆದು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇ.ಡಿ. ಕಚೇರಿಯೊಳಗೆ ಪ್ರವೇಶಿಸುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಸುರೇಶ್‌, ನಾನು ಯಾವುದೇ ಅಪರಾಧ ಮಾಡಿಲ್ಲ. ತನಿಖಾಧಿಕಾರಿಗಳು ಕೇಳುವ ಎಲ್ಲ ಪ್ರಶ್ನೆಗಳನ್ನು ಸಮರ್ಥವಾಗಿ ಎದುರಿಸುತ್ತೇನೆ. ತನಿಖೆಗೆ ಸಹಕರಿಸುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next