Advertisement

ಪ್ರತ್ಯೇಕ ಧರ್ಮ ವಿಷಯದಲ್ಲಿ ಡಿಕೆಶಿ ಅಭಿಪ್ರಾಯ ಸ್ವಾಗತಾರ್ಹ: ಬಿಎಸ್‌ವೈ

06:40 AM Oct 21, 2018 | Team Udayavani |

ಶಿವಮೊಗ್ಗ: ಲಿಂಗಾಯತ ಸ್ವತಂತ್ರ ಧರ್ಮದ ವಿಚಾರವಾಗಿ ಸಚಿವ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆ ಬಗ್ಗೆ ಟೀಕೆ, ಟಿಪ್ಪಣಿ ಮಾಡೋದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. 

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲಿಂಗಾಯತ ಸ್ವತಂತ್ರ ಧರ್ಮದ ವಿಚಾರಕ್ಕೆ ನಾವು ಕೈ ಹಾಕಬಾರದಿತ್ತು ಎಂದು ಡಿಕೆಶಿ ಹೇಳಿರೋದು ಅವರ ಸ್ವಂತ ಅಭಿಪ್ರಾಯವಾಗಿದೆ. ಪ್ರತ್ಯೇಕ ಧರ್ಮದ ವಿಚಾರವಾಗಿ ವಾಸ್ತವ ಸಂಗತಿಯನ್ನು ಅರ್ಥ ಮಾಡಿಕೊಂಡು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯನ್ನು ಎಲ್ಲರೂ ಸ್ವಾಗತಿಸಬೇಕು. ಅದರ ಬದಲು ಕುಹಕ ಆಡೋದು, ವಿರೋಧಿಸೋದು ಯಾರಿಗೂ ಶೋಭೆಯಲ್ಲ. ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಇದರಲ್ಲಿ ನನಗೆ ಯಾವುದೇ ರಾಜಕಾರಣ ಕಾಣುತ್ತಿಲ್ಲ ಎಂದು ಹೇಳಿದರು.

ಸಚಿವ ಡಿ.ಕೆ.ಶಿವಕುಮಾರ್‌ ಹೇಳಿಕೆ ಸ್ವಾಗತಾರ್ಹ. ಯಾವುದೇ ಧರ್ಮವನ್ನು ಒಡೆದು ರಾಜಕೀಯ ಮಾಡಬಾರದು. ತಪ್ಪು ಮಾಡುವ ಮುನ್ನ ಎಚ್ಚರಿಕೆ ವಹಿಸುವುದು ಅಗತ್ಯ. ತಪ್ಪು ತಿದ್ದಿಕೊಂಡು ಹೇಳಿಕೆ ನೀಡಿರುವುದು ಸ್ವಾಗತಾರ್ಹ.
– ಬಿ.ವೈ.ರಾಘವೇಂದ್ರ.

Advertisement

Udayavani is now on Telegram. Click here to join our channel and stay updated with the latest news.

Next