Advertisement

“ಮಹಿಳೆ ಅಡುಗೆ ಮಾಡಲು ಲಾಯಕ್ಕು’ಶಾಮನೂರು ಹೇಳಿಕೆಗೆ ಡಿಕೆಶಿ ಖಂಡನೆ

11:40 PM Mar 31, 2024 | Team Udayavani |

ಬೆಂಗಳೂರು: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ. ಯಾವ ಲೆಕ್ಕಾಚಾರದಲ್ಲಿ ಮಾತ ನಾಡಿದ್ದಾರೋ ಗೊತ್ತಿಲ್ಲ. ನಾನು ಅವರ ಮಾತನ್ನು ಒಪ್ಪುವುದಿಲ್ಲ. ಹೆಣ್ಣು ಕುಟುಂಬದ ಕಣ್ಣು. ನಮ್ಮ ಕಾರ್ಯಕ್ರಮಗಳು ಕೂಡ ಮಹಿಳಾ ಕೇಂದ್ರಿತವಾಗಿವೆ. ಅವರ ಹೇಳಿಕೆ ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

“ಮಹಿಳೆ ಅಡುಗೆ ಮಾಡಲು ಲಾಯಕ್ಕು’ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಕಾಂಗ್ರೆಸ್‌ ಮಹಿಳೆಯರ ಸಬಲೀಕರಣಕ್ಕೆ ಬದ್ಧವಾಗಿದೆ. ಅವರ ಸೊಸೆ ಸಹಿತ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಆರು ಮಹಿಳೆಯರನ್ನು ಕಣಕ್ಕೆ ಇಳಿಸಿದ್ದೇವೆ. ಜಾತಿ, ಧರ್ಮ ಹೊರತಾಗಿ ಮಹಿಳೆಯರು, ರೈತರು, ಕಾರ್ಮಿಕರು, ಯುವಕರ ಕಲ್ಯಾಣಕ್ಕೆ ನಾವು ಬದ್ಧ ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next