Advertisement
ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತ ನಾಡಿದ ಅವರು, ಆಪ್ತರಿಗೆ ಅಂತಾರಾಷ್ಟ್ರೀಯ ಕಂಪನಿ ಮೂಲಕ ಕಲ್ಲಿದ್ದಲು ಖರೀದಿಗೆ ಅವಕಾಶ ಕಲ್ಪಿಸಿ ಕೊಟ್ಟಿರುವುದಾಗಿ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. 2008 ರಿಂದ ಅಂತಾರಾಷ್ಟ್ರೀಯ ಸಂಸ್ಥೆಗ ಳಿಂದ ಕಲ್ಲಿದ್ದಲು ಖರೀದಿ ಮಾಡಲಾ ಗುತ್ತಿದ್ದು, ರಾಜ್ಯ ಸರ್ಕಾರ ಯಾವುದೇ ಖಾಸಗಿ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ಎಂಎಸ್ಡಿಸಿ ಸಂಸ್ಥೆ ಜೊತೆ ಮಾತ್ರ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
“ಸಿಟಿ ರವಿ ನನ್ನ ವಿರುದ್ಧ ದಾಖಲೆ ರಹಿತ ಆರೋಪ ಮಾಡಿದ್ದಾರೆ. ಬೇರೆ ರಾಜಕಾರಣಿಗಳ ಜೊತೆ ಆಡಿದಂತೆ ನನ್ನ ಜೊತೆ ಮಕ್ಕಳಾಟ ಆಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ,” ಎಂದರು. “ನಾನು ರಾಜಕೀಯದಲ್ಲಿ ದೊಡ್ಡ ಕನಸು ಇಟ್ಟುಕೊಂಡು ಬಂದವನು. ಕನಕಪುರದಿಂದ ಕಷ್ಟಪಟ್ಟು ಬೆಂಗಳೂರಿಗೆ ಬಂದು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂತಿದ್ದೇನೆ. ನನಗೆ ರಾಜಕೀಯ ಭವಿಷ್ಯದ ಬಗ್ಗೆ ಕನಸುಗಳಿವೆ. ನನ್ನ ವಿರುದ್ಧ ಅನಗತ್ಯ ಆರೋಪ ಮಾಡುವುದನ್ನು ನಾನು ಸಹಿಸುವುದಿಲ್ಲ,” ಎಂದರು.