Advertisement

ಮತದಾರರ ಖರೀದಿಗೆ ಡಿಕೆಶಿ ಯತ್ನ: ಬೊಮ್ಮಾಯಿ

06:28 AM May 13, 2019 | Lakshmi GovindaRaj |

ಹುಬ್ಬಳ್ಳಿ: ಸಚಿವ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಕನಕಪುರದ 150ಕ್ಕೂ ಹೆಚ್ಚು ಕಾರ್ಯಕರ್ತರು ಕ್ಷೇತ್ರದಲ್ಲಿದ್ದು, ಮತದಾರರನ್ನು ಖರೀದಿಸಲು ಯತ್ನಿಸುತ್ತಿರುವ ಕುರಿತು ಮಾಹಿತಿ ಬಂದಿದೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಿರೇಹರಕುಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಕ್ಷೇತ್ರದಲ್ಲಿ ಹಣದ ಹೊಳೆ ಹರಿಯಲು ಸಾಧ್ಯವಿಲ್ಲ.

Advertisement

ಇಲ್ಲಿನ ಜನರು ಪ್ರಜ್ಞಾವಂತರಿದ್ದು, ಹಣಕ್ಕೆ ಸೊಪ್ಪು ಹಾಕುವುದಿಲ್ಲ ‘ ಎಂದರು. ಮಾಜಿ ಸಚಿವ ದಿ| ಸಿ.ಎಸ್‌. ಶಿವಳ್ಳಿ ಅವರ ನಿಧನದ ನಂತರ ಅನುಕಂಪದ ಅಲೆಯಲ್ಲಿ ಕಾಂಗ್ರೆಸ್‌ ಕುಂದಗೋಳ ಗೆಲ್ಲಲು ಹೊರಟಿದೆ. ಆದರೆ ಕಾಂಗ್ರೆಸ್‌ ಅಭ್ಯರ್ಥಿಗೆ ಅನುಕಂಪ ಸಿಗದು.

ಹಿಂದಿನ ಸಿದ್ದು ಸರ್ಕಾರ ಐದು ವರ್ಷಗಳ ಕಾಲ ಶಿವಳ್ಳಿಗೆ ಸಚಿವ ಸ್ಥಾನ ನೀಡಲಿಲ್ಲ. ಮೈತ್ರಿ ಸರ್ಕಾರ ಬಂದ ನಂತರವೂ ಸಚಿವ ಸ್ಥಾನ ನೀಡಲಿಲ್ಲ. ಕೊನೇ ಗಳಿಗೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲೆಯ ಉಸ್ತುವಾರಿ ಕೊಡದಿರುವುದೂ ಕೂಡ ಶಿವಳ್ಳಿ ಅವರಿಗೆ ಬೇಸರವಿತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next