Advertisement

ಡಿಕೆಶಿಗೆ ಲಿಂಗಾಯತ ಧರ್ಮದ ಅರಿವಿಲ್ಲ: ಕೂಡಲಸಂಗಮ ಶ್ರೀ

11:37 PM Jun 30, 2019 | Team Udayavani |

ಕೂಡಲಸಂಗಮ: “ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಲಿಂಗಾಯತ ಧರ್ಮದ ಬಗ್ಗೆ ಅರಿವಿಲ್ಲ. ಆದ್ದರಿಂದ ಲಿಂಗಾಯತ ಧರ್ಮದ ಬಗ್ಗೆ ತಿಳಿಯದೆ ಮಾತನಾಡುತ್ತಾರೆ. ಅವರಿಗೆ ಲಿಂಗಾಯತ ಧರ್ಮದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿಂತಿಲ್ಲ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದ್ದರಿಂದ ರಾಜ್ಯದಲ್ಲಿ ಹೋರಾಟದ ಅಗತ್ಯವಿಲ್ಲ. ಕೇಂದ್ರ ಸರ್ಕಾರಕ್ಕೆ ಪುನರ್‌ ಪರಿಶೀಲಿಸುವಂತೆ ಒತ್ತಾಯ ಮಾಡುತ್ತೇವೆ. ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ ಸುಪ್ರೀಂಕೋರ್ಟ್‌ ಮೂಲಕ ಹೋರಾಟ ಮಾಡುತ್ತೇವೆ ಎಂದರು.

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಬಗ್ಗೆ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿಲ್ಲ. ಬಸವಣ್ಣನ ಐಕ್ಯ ಸ್ಥಳ ಶಿಥಿಲಾವಸ್ಥೆಗೊಂಡಿರುವುದನ್ನು ತೋರಿಸಿದೆ. ಬಸವಣ್ಣನ ಐಕ್ಯ ಮಂಟಪ ಪ್ರವೇಶ ಸ್ಥಗಿತಗೊಂಡು 38 ದಿನ ಕಳೆದಿದೆ. ಸರ್ಕಾರ ಜು.31ರೊಳಗೆ ಕಾಮಗಾರಿ ಕೆಲಸ ಪೂರ್ಣಗೊಳಿಸಿ ಶ್ರಾವಣಕ್ಕೆ ಬರುವ ಭಕ್ತರಿಗೆ ಬಸವಣ್ಣನ ದರ್ಶನಕ್ಕೆ ಅನುಕೂಲ ಮಾಡಿಕೊಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next