Advertisement

ಡಿಕೆಶಿ ಪದಗ್ರಹಣ ನೇರ ಪ್ರಸಾರ

05:40 AM Jun 01, 2020 | Lakshmi GovindaRaj |

ಮಂಡ್ಯ: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಲೋಕೇಶ್‌ಗೌಡ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್‌ ಪದಗ್ರಹಣ ಸಮಾರಂಭ ಜೂ.7ರಂದು ನಡೆಯಲಿದ್ದು, ಈ ಕೊರೊನಾ ಸಂದರ್ಭದಲ್ಲಿ ಅದೂಟಛಿರಿ ಕಾರ್ಯಕ್ರಮ ಮಾಡುತ್ತಿಲ್ಲ.

Advertisement

ಕೆಪಿಸಿಸಿ ಕಚೇರಿಯಲ್ಲೇ ಅಧಿಕಾರ ಸ್ವೀಕರಿಸುವ ಸಮಾರಂಭ ನಡೆಯಲಿದ್ದು,  ಸಮಾರಂಭದ ದೃಶ್ಯಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ ಮತ್ತು ರಾಷ್ಟ್ರಧ್ವಜ ಹಿಡಿದು, ಮಾಸ್ಕ್ ಧರಿಸಿ, ಸಾಮಾಜಿಕ  ಅಂತರ ಕಾಯ್ದುಕೊಂಡು ಸಮಾರಂಭ ವೀಕ್ಷಣೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ್‌ ಮಾತನಾಡಿ, ಜಿಲ್ಲೆಯ 224 ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿ ನೇರ  ಪ್ರಸಾರವಿದ್ದು, ಎನ್‌ಎಸ್‌ಯುಐ, ಯುವ ಕಾಂಗ್ರೆಸ್‌ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಬರಲಿದ್ದು, ತಾವು ಪಕ್ಷವನ್ನು ಸಂಘಟಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಉಸ್ತುವಾರಿ ಕುಮಾರ್‌ಸಿಂಗ್‌, ಜಿಲ್ಲಾ ಉಪಾಧ್ಯಕ್ಷ ಸೆಬಾಸ್ಟಿನ್‌  ಪ್ರಮೋದ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಬೀವುಲ್ಲಾ ಖಾನ್‌, ನವೀನ್‌ಕುಮಾರ್‌  ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next